ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆ ಸಮೀಪ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ.
ಆ.24ರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿದ್ದು, ಆ.25ರ ಮುಂಜಾನೆ ಗೋವಿಂದ ಅಭಿಷೇಕ್ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಚ್ಸಿ ಆದರ್ಶ ಹಾಗೂ ಪಿಸಿ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಉಡುಪಿ ರೈಲು ನಿಲ್ದಾಣದತ್ತ ತೆರಳುತ್ತಿದ್ದ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಆರೋಪಿ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026ರಂತೆ ಬಿಎನ್ಎಸ್ ಸೆಕ್ಷನ್ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.






