ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೋ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷ ದ ರಾಷ್ಟ್ರೀಯ ಉಪಾಧ್ಯಕ್ಷ, ಹಾಗೂ ರಾಜ್ಯ ಸಭಾ ಸದಸ್ಯ ಶ್ರೀ ಪ್ರೊ.ನಾಗರಾಜ್ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶ್ರೀ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಶ್ರೀ ಮಧುಕರ ಮುದ್ರಾಡಿ,ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ಜಿಲ್ಲಾ ಖಜಾಂಚಿ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.






