ಉಡುಪಿ: ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲೆಯ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಮಾಹಿತಿ ಕೇಂದ್ರ ಸ್ಥಾಪಿಸಲು ಜಿಲ್ಲಾಡಳಿತ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಅವರು ಉಡುಪಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಸ್ಥಳಾವಕಾಶದ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದರು.







