ಉಡುಪಿ: ಗಂಗೊಳ್ಳಿ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ವೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಲು ಆರಂಭಿಸಿದ ಘಟನೆ ನಡೆದಿದೆ. ಬೋಟ್ನಲ್ಲಿದ್ದ 30 ಮೀನುಗಾರರನ್ನು ಕರಾವಳಿ ಕಾವಲು ಪಡೆ ಸುರಕ್ಷಿತವಾಗಿ ರಕ್ಷಿಸಿದೆ.
ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದ್ದು, ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಬೋಟ್ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿರುಕು ಕಾಣಿಸಿಕೊಳ್ಳುತ್ತಿದ್ದಂತೆ ಬೋಟ್ಗೆ ನೀರು ನುಗ್ಗಿ ಮುಳುಗಲು ಆರಂಭಿಸಿದೆ.
ಮಾಹಿತಿ ದೊರೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಕರಾವಳಿ ಮೀಸಲು ಪಡೆಯ ಇನ್ಸ್ಪೆಕ್ಟರ್ ರಮೇಶ್ ಕೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಕಾವಲು ಪಡೆ, ಬೋಟ್ನಲ್ಲಿದ್ದ ಎಲ್ಲಾ 30 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಬಳಿಕ ಮೀನುಗಾರರು ಯಾವುದೇ ಅಪಾಯವಿಲ್ಲದೆ ತೀರ ಪ್ರದೇಶವನ್ನು ಸೇರಿದ್ದಾರೆ.







