Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

Dhrishya News by Dhrishya News
27/08/2026
in ಸುದ್ದಿಗಳು
0
ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ
0
SHARES
3
VIEWS
Share on FacebookShare on Twitter

ಕಾರ್ಕಳ : ಕಾರ್ಕಳ, 26 ಆಗಸ್ಟ್ 2026: ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಹಯೋಗದೊಂದಿಗೆ “5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ : ಅಪ್‌ಡೇಟ್ ಮತ್ತು ಥ್ಯಾಂಕ್ಸ್ ಗಿವಿಂಗ್ ” ಎಂಬ ವಿಶೇಷ ಕೃತಜ್ಞತಾ ಕಾರ್ಯಕ್ರಮದೊಂದಿಗೆ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆಯನ್ನು ಆಚರಿಸಿತು.

ಈ ಕಾರ್ಯಕ್ರಮವು ಡಯಾಲಿಸಿಸ್ ಘಟಕದ ಬೆಳವಣಿಗೆ, ಗುಣಮಟ್ಟದ ಆರೈಕೆ, ಕೈಗೆಟುಕುವ ಮತ್ತು ಸಹಾನುಭೂತಿಯ ಡಯಾಲಿಸಿಸ್  ಸೇವೆ ಯನ್ನು, ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ  ರೋಗಿಗಳಿಗೆ ಡಯಾಲಿಸಿಸ್ ಸೇವೆಯನ್ನು ಒದಗಿಸುವ ಆಸ್ಪತ್ರೆಯ ನಿರಂತರ ಬದ್ಧತೆಯನ್ನು ಎತ್ತಿ ತೋರಿಸಿತು.

ಆಸ್ಪತ್ರೆಯ ಡಯಾಲಿಸಿಸ್ ಘಟಕವು ರೋಟರಿ ಕ್ಲಬ್ ಮಣಿಪಾಲದಿಂದ ಅಮೂಲ್ಯವಾದ ಬೆಂಬಲವನ್ನು ಪಡೆದಿದೆ, ಈ ಸಂಸ್ಥೆಯು ‘ರೋಟರಿ ಗ್ಲೋಬಲ್ ಗ್ರಾಂಟ್’ ಮೂಲಕ ಮೂರು ಡಯಾಲಿಸಿಸ್ ಯಂತ್ರಗಳನ್ನು ಪ್ರಾಯೋಜಿಸಿದೆ. ಇದರೊಂದಿಗೆ, ಕಾರ್ಕಳದ ‘ಜಮೀಯತುಲ್ ಫಲಾಹ್’ ಮತ್ತು ಹೆಬ್ರಿಯ ‘ಬೆಳಂಜೆ ಸಂಜೀವ ಹೆಗ್ಡೆ ಟ್ರಸ್ಟ್’ ಕೂಡ ಹೆಚ್ಚುವರಿ ಯಂತ್ರಗಳನ್ನು ದೇಣಿಗೆಯಾಗಿ ನೀಡಿವೆ. ಅಲ್ಲದೆ, ಅಜೇಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಹಾಗೂ ವಿವಿಧ ಕುಟುಂಬಗಳು ಮತ್ತು ಇತರ ಹಿತೈಷಿಗಳು ನೀಡಿದ ಬೆಂಬಲವನ್ನೂ ಆಸ್ಪತ್ರೆಯು ಕೃತಜ್ಞತೆಯಿಂದ ಸ್ಮರಿಸಿದೆ.

ಕಾರ್ಯಕ್ರಮದ ಕುರಿತು ಮಾತನಾಡಿದ ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷರಾದ Rtn. ಡಾ. ಪ್ರದೀಪ್ ಎಸ್., ದೀರ್ಘಕಾಲೀನ ಡಯಾಲಿಸಿಸ್ ಅಗತ್ಯವಿರುವ ರೋಗಿಗಳಿಗೆ ರೋಟರಿ ಗ್ಲೋಬಲ್ ಗ್ರಾಂಟ್ ಮೂಲಕ ಉತ್ತಮ ಮೂತ್ರಪಿಂಡ ಆರೈಕೆ ಮತ್ತು ಡಯಾಲಿಸಿಸ್ ಸೌಲಭ್ಯ ಒದಗಿಸುವಲ್ಲಿ ರೋಟರಿ ಕ್ಲಬ್‌ನ ಸಹಕಾರವನ್ನು ವಿವರಿಸಿದರು.

ಡಾ. ದರ್ಶನ್ ರಂಗಸ್ವಾಮಿ, ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ನೆಫ್ರಾಲಜಿ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ, ಇವರು ಡಯಾಲಿಸಿಸ್ ಚಿಕಿತ್ಸೆಯಲ್ಲಿ ಗುಣಮಟ್ಟ, ರೋಗಿಗಳ ಸುರಕ್ಷತೆ ಮತ್ತು ನಿರಂತರ ಆರೈಕೆಯ ಮಹತ್ವವನ್ನು ತಿಳಿಸಿದರು. ಡಯಾಲಿಸಿಸ್ ಸೇವೆಗೆ ಸಹಕರಿಸಿದ ಆಸ್ಪತ್ರೆಯ ತಂಡ ಹಾಗೂ ದಾನಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಆಸ್ಪತ್ರೆಯ  ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ಕೆ. ಆರ್, ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ರೋಗಿಗಳಿಗೆ ದೂರದ ಪ್ರಯಾಣ ಮಾಡದೇ ಸುರಕ್ಷಿತ ಮತ್ತು ನಿರಂತರ ಡಯಾಲಿಸಿಸ್ ಸೇವೆ ನೀಡಲು ಆಸ್ಪತ್ರೆ ಬದ್ಧವಾಗಿದೆ ಎಂದು ಹೇಳಿದರು.

ಇದರೊಂದಿಗೆ ಹಲವಾರು ರೋಗಿಗಳಿಗೆ ವಿವಿಧ ದಾನಿಗಳ ಸಹಕಾರದಿಂದ ಡಯಾಲಿಸಿಸ್ ಸೌಲಭ್ಯವು  ರಿಯಾಯಿತಿ ದರದಲ್ಲಿ ಒದಗಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ, ಕಳೆದ ಐದು ವರ್ಷಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಬಲಪಡಿಸಲು ಸಹಕರಿಸಿದ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮತ್ತು ಇತರ  ಸಿಬ್ಬಂಧಿವರ್ಗ, ದಾನಿಗಳು, ಸಂಸ್ಥೆಗಳು, ಕುಟುಂಬಗಳು ಮತ್ತು ಹಿತೈಷಿಗಳ ಕೊಡುಗೆಯನ್ನು ಸ್ಮರಿಸಲಾಯಿತು.

Previous Post

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

27/08/2026
ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

27/08/2026
ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕೇಸರ ಗೋಪಾಲಕೃಷ್ಣ ರಾವ್ ನಿಧನ..!

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕೇಸರ ಗೋಪಾಲಕೃಷ್ಣ ರಾವ್ ನಿಧನ..!

27/08/2026
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

27/08/2026

Recent News

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

27/08/2026
ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

27/08/2026
ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕೇಸರ ಗೋಪಾಲಕೃಷ್ಣ ರಾವ್ ನಿಧನ..!

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕೇಸರ ಗೋಪಾಲಕೃಷ್ಣ ರಾವ್ ನಿಧನ..!

27/08/2026
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

27/08/2026