ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ
ರಾಘವೇಂದ್ರ ಗುರುಸಾರ್ವಭೌಮರ 355 ನೇ ಆರಾಧನೆಯ ಪ್ರಯುಕ್ತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಉಡುಪಿ ರಥಬೀದಿಯಲ್ಲಿರುವ ರಾಘವೇಂದ್ರ ಮಠದಲ್ಲಿ ವೃಂದಾವನಕ್ಕೆ ಪೂಜೆ ಸಲ್ಲಿಸಿ ಬಳಿಕ ರಥೋತ್ಸವದಲ್ಲಿ ಪಾಲ್ಗೊಂಡರು ಹಾಗೂ ಸಂಪ್ರದಾಯದಂತೆ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಉತ್ಸವ ಮೂರ್ತಿಗೆ ಪೂಜೆ ನಡೆಸಿದರು.








