ಮಣಿಪಾಲ, ಆಗಸ್ಟ್ 31, 2026 : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ] ಇದರ ಘಟಕವಾಗಿರುವ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸಾಯನ್ಸಸ್, ಹ್ಯುಮಾನಿಟೀಸ್ ಆ್ಯಂಡ್ ಆರ್ಟ್ಸ್ [ಮಿಶ] ವಿಭಾಗದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರ [ಸಿಕೆಆರ್ಎಲ್] ವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಇದರ ಸಹಭಾಗಿತ್ವದಲ್ಲಿ ‘ತುಳು ಸಂಭಾಷಣ ಕಲಿಕೆ’ ಶೈಕ್ಷಣಿಕ ಕಾರ್ಯಕ್ರಮನ್ನು ಆಯೋಜಿಸುತ್ತಿದ್ದು ಇದರ ಉದ್ಘಾಟನೆ ಸೆಪ್ಟೆಂಬರ್ 1, 2025ರಂದು ಸಂಜೆ 5. 30 ಗಂಟೆಗೆ ನಡೆಯಲಿದೆ. ಉಡುಪಿ ಜಿಲ್ಲಾ ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್ ಅವರು ಉದ್ಘಾಟಿಸಲಿದ್ದಾರೆ.
ಮಿಶ ದ ನಿರ್ದೇಶಕರಾದ ಪ್ರೊ ಗಾಯತ್ರಿ ಪ್ರಭು ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರ್ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸಂತೋಷ್ ಶೆಟ್ಟಿ ಹಿರಿಯಡಕ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ.
ಮಾಹೆಯು ಪ್ರಾದೇಶಿಕ ಭಾಷೆ, ಸಂಸ್ಕೃತಿ, ಸಮುದಾಯಗಳ ಅಧ್ಯಯನ-ಸಂಶೋಧನೆಗಳಿಗೆ ಆದ್ಯತೆಕೊಡುತ್ತಿದ್ದು, ತುಳು ಭಾಷೆಯ ಕಲಿಕಾ ತರಗತಿಯು ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿರುವುದು.







