ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ. ಉತ್ಸವಗಳು ಸೆಪ್ಟೆಂಬರ್ 4 ಮತ್ತು 5, 2026ರಂದು ನಡೆಯಲಿವೆ.
ಉತ್ಸವದ ಭದ್ರತಾ ಕರ್ತವ್ಯಕ್ಕಾಗಿ 1 ಎಸ್ಪಿ, 1 ಹೆಚ್ಚುವರಿ ಎಸ್ಪಿ, 2 ಡಿವೈಎಸ್ಪಿಗಳು, 6 ಪೊಲೀಸ್ ಇನ್ಸ್ಪೆಕ್ಟರ್ಗಳು, 25 ಪಿಎಸ್ಐಗಳು, 35 ಎಎಸ್ಐಗಳು, 186 ಹೆಡ್ ಕಾನ್ಸ್ಟೇಬಲ್ಗಳು ಹಾಗೂ ಪೊಲೀಸ್ ಮತ್ತು ಮಹಿಳಾ ಸಿಬ್ಬಂದಿ, 50 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ 1 ಕೆಎಸ್ಆರ್ಪಿ ತುಕಡಿ, 9 ಡಿಎಆರ್ ತುಕಡಿಗಳು, 3 ಅಗ್ನಿಶಾಮಕ ತಂಡಗಳು, 2 ಆಂಬ್ಯುಲೆನ್ಸ್ಗಳು ಹಾಗೂ 3 ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ.
7 ಕಡೆ ವಾಹನ ಪಾರ್ಕಿಂಗ್ ವ್ಯವಸ್ಥೆ
ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳ ವಾಹನಗಳ ಸುಗಮ ಪಾರ್ಕಿಂಗ್ಗಾಗಿ ನಗರದ 7 ಸ್ಥಳಗಳನ್ನು ಗುರುತಿಸಲಾಗಿದೆ.
ಎಂಜಿಎಂ ಮೈದಾನ
ಶ್ರೀಕೃಷ್ಣ ಮಠ ರಾಜಾಂಗಣ ಪಾರ್ಕಿಂಗ್
ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್
ಬೀಡಿನಗುಡ್ಡೆ ಮೈದಾನ
ಬೀಡಿನಗುಡ್ಡೆ ಕ್ರೀಡಾಂಗಣ
ವಿದ್ಯೋದಯ ಶಾಲೆ ಪಾರ್ಕಿಂಗ್
ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್
45 ಕಡೆ ಹೆಚ್ಚುವರಿ ಸಿಸಿಟಿವಿ, ಡ್ರೋನ್ ಕಣ್ಗಾವಲು ಉತ್ಸವದ ಸಂದರ್ಭದಲ್ಲಿ ಜನಸಂದಣಿ ನಿಯಂತ್ರಣ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಕಾರ ಪಡೆಯಲಾಗುತ್ತಿದೆ.
ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 12 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಬಳಸಲಾಗುತ್ತಿದೆ. ಉತ್ಸವ ಪ್ರದೇಶದಲ್ಲಿ ಡ್ರೋನ್ಗಳ ಮೂಲಕವೂ ನಿರಂತರ ಕಣ್ಗಾವಲು ಇರಲಿದೆ.
ಅಲ್ಲದೆ, ಈ ಹಿಂದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ನಿಗಾ ವಹಿಸಲು ಫಿಂಗರ್ಪ್ರಿಂಟ್ ಸ್ಕ್ಯಾನರ್ಗಳನ್ನು ಬಳಸಲಾಗುತ್ತಿದೆ.
ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಮನವಿ ಉತ್ಸವದ ಸಂದರ್ಭದಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನಿಗದಿತ ಸ್ಥಳಗಳಲ್ಲಿಯೇ ವಾಹನಗಳನ್ನು ಪಾರ್ಕ್ ಮಾಡಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಪೊಲೀಸರು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ 112ಕ್ಕೆ ಕರೆ ಮಾಡಿ ಪೊಲೀಸ್ ಸಹಾಯ ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಶಾಂತಿಯುತ, ಸುರಕ್ಷಿತ ಹಾಗೂ ಸುಗಮ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ ಉತ್ಸವಕ್ಕೆ ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.








