ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಶ್ರೀ ಕೃಷ್ಣ ಮಠದ ಸಿಬ್ಬಂದಿ ವರ್ಗದವರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ನಡೆಯಿತು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಿಬ್ಬಂದಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೇರಳದ ತಿರುವನಂತಪುರಂ ದೇವಸ್ಥಾನದ ತಂತ್ರಿಗಳಾದ ತರಣನಳೂರ್ ಸತೀಶನ್ ನಂಬೂತ್ರಿಪಾದ್ ಅವರು ಉಪಸ್ಥಿತರಿದ್ದರು.
ಮಣಿಪಾಲ ಆರೋಗ್ಯ ಕಾರ್ಡ್ನಿಂದ ದೊರೆಯುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಸವಲತ್ತುಗಳ ಕುರಿತು ವಿಷ್ಣು ಪ್ರಸಾದ್ ಪಾಡಿಗಾರ್ ಅವರು ಸಿಬ್ಬಂದಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಆನಂದ ತೀರ್ಥ ಉಪಾಧ್ಯಾಯ ಅವರು ನಿರೂಪಿಸಿದರು. ಶ್ರೀ ಕೃಷ್ಣ ಮಠದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.







