Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಮತ್ತು ದ.ಕ.: ಅಗತ್ಯವಿದ್ದಲ್ಲಿ ಅನುದಾನ – ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
13/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರು ಸರಬರಾಜು ಮಾಡಬೇಕು. ಆವಶ್ಯಕತೆಗೆ ತಕ್ಕಂತೆ ಸರಕಾರ ಅನುದಾನ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ತಿಳಿಸಿದ್ದಾರೆ.

ಟ್ಯಾಂಕರ್‌ ಮೂಲಕ ಕುಡಿಯುವ ನೀರಿನ ಪೂರೈಕೆ ಮುಂದುವರಿಸುವಂತೆ ಸೂಚನೆ ನೀಡಿದ ಸಿಎಂ, ಅನುದಾನಕ್ಕೆ ಕೊರತೆ ಇಲ್ಲ. ಜನರಿಗೆ ಯಾವುದೇ ತೊಂದರೆ ಎದುರಾಗದಂತೆ ಎಚ್ಚರ ವಹಿಸಬೇಕು. ಮಳೆ ಸುರಿದಿದೆ ಅಂದ ಮಾತ್ರಕ್ಕೆ ಕುಡಿಯುವ ನೀರು ಒಮ್ಮೆಲೆ ಸಿಗಲು ಸಾಧ್ಯವಿಲ್ಲ . ಹೀಗಾಗಿ ಲಭ್ಯವಿರುವ ನೀರನ್ನು ಬಳಸುವಂತೆ ಸೂಚಿಸಿದರು.

ಉಡುಪಿ ಜಿಲ್ಲೆಯ 58 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಪ್ರಸ್ತುತ ಹೆಚ್ಚುವರಿಯಾಗಿ ಯಾವ ಗ್ರಾಮಗಳಿಂದಲೂ ನೀರಿನ ಸಮಸ್ಯೆಯ ಬಗ್ಗೆ ದೂರುಗಳು ಬಂದಿಲ್ಲ. ಈ ನಡುವೆ ಮಳೆ ಆರಂಭಗೊಂಡ ಕಾರಣ ಮುಂದಿನ ದಿನದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದು ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್‌. ತಿಳಿಸಿದರು

ದ.ಕ ಜಿಲ್ಲೆಯ ಸ್ಥಿತಿಗತಿ ವಿವರಣೆ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಜಿಲ್ಲೆಯಲ್ಲಿ ಜೂ. 8ರ ಬಳಿಕ ಉತ್ತಮ ಮಳೆಯಾಗುತ್ತಿದೆ. ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 4.6 ಮೀ. ಹಾಗೂ ಎಎಂಆರ್‌ ಡ್ಯಾಂನಲ್ಲಿ 18 ಮೀ.ಗೆ ಏರಿಕೆಯಾಗಿದೆ. ಹಾಗಾಗಿ ನೀರಿಗೆ ಸದ್ಯ ಸಮಸ್ಯೆ ಇಲ್ಲ, ಈಗಾಗಲೇ ಮಂಗಳೂರು ನಗರಕ್ಕೆ ನೀರಿನ ರೇಷನಿಂಗ್‌ ನಿಲ್ಲಿಸಲಾಗಿದೆ. ಎತ್ತರದ ಪ್ರದೇಶಗಳಲ್ಲಿ 13 ಟ್ಯಾಂಕರ್‌ ಮೂಲಕ ನೀರಿನ ವಿತರಣೆ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ 22 ಗ್ರಾಮಗಳ ಪೈಕಿ 7 ಕಡೆ ಖಾಸಗಿ ಬೋರ್‌ವೆಲ್‌ಗ‌ಳನ್ನು ಪಡೆದುಕೊಂಡು ನೀರು ಪೂರೈಕೆ ಮಾಡಲಾಗುತ್ತಿದೆ, ಉಳಿದ 15 ಕಡೆ ಸರಕಾರದಿಂದ ಸಿಕ್ಕಿರುವ 1 ಕೋಟಿ ರೂ. ಅನುದಾನ ಹಾಗೂ ಜಿಲ್ಲಾಡಳಿತದಿಂದ 30 ಲಕ್ಷ ರೂ. ಸೇರಿಸಿಕೊಂಡು ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ ಎಂದರು

Tags: #ಸಿಎಂ #ಸಿದ್ದರಾಮಯ್ಯ #ಉಡುಪಿ #ಮಂಗಳೂರು
Previous Post

ಕುಂದಾಪುರ : ರಸ್ತೆ ದಾಟಲು ನಿಂತಿದ್ದ ಸಂದರ್ಭ ಬಸ್ ಡಿಕ್ಕಿ ವ್ಯಕ್ತಿ ಸಾವು..!!

Next Post

ವಾಟ್ಸಾಪ್‌ ಹೊಸ ಅಪ್ಡೇಟ್‌ ಪರಿಚಯಿಸಿದ್ದು, ತನ್ನ ಲುಕ್‌ ಅನ್ನು ರಿಫ್ರೆಶ್‌ ಮಾಡಿದೆ : ಬದಲಾಗಿದೆ ವಾಟ್ಸಾಪ್‌ನ ಲೇಔಟ್‌!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಟ್ಸಾಪ್‌ ಹೊಸ ಅಪ್ಡೇಟ್‌ ಪರಿಚಯಿಸಿದ್ದು, ತನ್ನ ಲುಕ್‌ ಅನ್ನು ರಿಫ್ರೆಶ್‌ ಮಾಡಿದೆ : ಬದಲಾಗಿದೆ ವಾಟ್ಸಾಪ್‌ನ ಲೇಔಟ್‌!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026