ಚೇರ್ಕಾಡಿ, ಸೆಪ್ಟೆಂಬರ್ 08: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಉಡುಪಿ ಜಿಲ್ಲೆ. ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಚೇರ್ಕಾಡಿ. ಇವರ ಸಂಯುಕ್ತ ಆಶ್ರಯದಲ್ಲಿ, ಬ್ರಹ್ಮಾವರ ತಾಲ್ಲೂಕು, ಪದವಿಪೂರ್ವ ಕಾಲೇಜು ವಿಭಾಗದ ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಅಭ್ಯಾಗತರಾಗಿ ಆಗಮಿಸಿದ, ಬ್ರಹ್ಮಾವರ ಎಸ್ ಎಮ್ ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ ಭಟ್ ಇವರು ಉದ್ಘಾಟನಾ ಸಮಾರಂಭದಲ್ಲಿ, ಸ್ಪರ್ಧಾಳುಗಳನ್ನು ಉದ್ದೇಶಿಸಿ ಮಾತನಾಡುತ್ತಾ,
ಕ್ರೀಡೆಯು, ಗೆಲ್ಲುವುದಕ್ಕಿಂತ ಮುಖ್ಯವಾಗಿ ನಮ್ಮಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಬದುಕಿನಲ್ಲಿ ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ಛಲ ಮತ್ತು ಶಿಸ್ತು ಕ್ರೀಡೆ ಮತ್ತು ಕ್ರೀಡಾಳುಗಳಲ್ಲಿ ಇರಬೇಕಾದ ಬಹಳ ಮುಖ್ಯವಾದ ಗುಣ ಎಂದರು.
ಇನ್ನೋರ್ವ ಮುಖ್ಯ ಅಭ್ಯಾಗತರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶ್ರೀ ಸುಕೇಶ್ ಶೆಟ್ಟಿ ಇವರು ಮಾತನಾಡುತ್ತಾ, ಯಾರು ಕ್ರೀಡೆಯನ್ನು ಪ್ರೀತಿಸುತ್ತಾರೋ, ಯಾರು ಕ್ರೀಡೆಯನ್ನು ಗೌರವಿಸುತ್ತಾರೋ ಅವರು ಮಾತ್ರ ಈ ಕ್ಷೇತ್ರದಲ್ಲಿ ಅದ್ಭುತವಾದ ಸಾಧನೆಗಳನ್ನು ಮಾಡಲು ಸಾದ್ಯ. ಎಂದರು.
ತ್ರೋಬಾಲ್ ಪಂದ್ಯಾಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕು/ ವೈಷ್ಣವಿ ಜಿ ಸುವರ್ಣ ಇವರು ದೀಪ ಬೆಳಗಿಸಿ,ಸ್ಪರ್ಧಾಳುಗಳಿಗೆ ಶುಭ ಹಾರೈಸಿ ಪಂದ್ಯಾಟಕ್ಕೆ ಚಾಲನೆ ನೀಡಿದರು.
ವೇದೀಕೆಯಲ್ಲಿ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಶ್ರೀ ಐತಾಳ್, ಬ್ರಹ್ಮಾವರ ತಾಲ್ಲೂಕು ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ್ ಶೆಟ್ಟಿ, ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಜತ್ ಮರಕಾಲ ಉಪಸ್ಥಿತರಿದ್ದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಾಲಕರ ವಿಭಾಗದಲ್ಲಿ ಸರಕಾರ ಪದವಿ ಪೂರ್ವ ಕಾಲೇಜು ಗೋಳಿಯಂಗಡಿ, ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಮಂದಾರ್ತಿ. ಇವರು ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.
ಕನ್ನಡ ಭಾಷಾ ಉಪನ್ಯಾಸಕ ಶ್ರೀ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವಿಜಯಲಕ್ಷ್ಮಿಸ್ವಾಗತಿಸಿ, ಉಪನ್ಯಾಸಕ ಪ್ರಸಾದ್ ದೇಶಪಾಂಡೆ ವಂದನಾರ್ಪಣೆಗೈದರು.







