ಮಲ್ಪೆ: ಉಡುಪಿ ತಾಲೂಕು ಕೊಡವೂರು ಗ್ರಾಮದ ಮೂಡುತೋಟ ನಿವಾಸಿ ಶರತ್ (34) ಎಂಬವರು ನಾಪತ್ತೆಯಾಗಿರುವ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರತ್ ಅವರು ಸೆಪ್ಟೆಂಬರ್ 7ರಂದು ಬೆಳಗ್ಗೆ 8:30ರ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಆದರೆ ಈವರೆಗೂ ಮನೆಗೆ ವಾಪಸಾಗಿಲ್ಲ. ಸಂಬಂಧಿಕರ ಮನೆಗಳಿಗೂ ತೆರಳದೆ ಕಾಣೆಯಾಗಿದ್ದಾರೆ ಎಂದು ಅವರ ದೊಡ್ಡಪ್ಪನ ಮಗ ನಿತೀಶ್ (31) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 99/2026, ಕಲಂ ಮನುಷ್ಯ ಕಾಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





