ಉಚ್ಚಿಲ, ಸೆಪ್ಟೆಂಬರ್ 17, 2026:
ಕರ್ನಾಟಕ ಸರ್ಕಾರದ ಪೌರಾಡಳಿತ ಸಚಿವರಾದ ಮಾನ್ಯ ಶ್ರೀ ಎಚ್. ಸಿ. ಬಾಲಕೃಷ್ಣ ಅವರು ಇಂದು, ದಿನಾಂಕ 17.09.2026ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ, ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಸಚಿವರನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ ಮೂಳೂರು, ನಾರಾಯಣ ಸಿ. ಕರ್ಕೇರ, ದಿನೇಶ್ ಎರ್ಮಾಳ್, ಮೋಹನ್ ಬಂಗೇರ ಕಾಪು, ಶೇಖರ್ ಪುತ್ರನ್ ಎರ್ಮಾಳ್, ಪುರೋಹಿತರಾದ ಶ್ರೀಪತಿ ಉಪಾಧ್ಯಾಯ ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.






