ಶಂಕರನಾರಾಯಣ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಕೆಂಜಿಮನೆಯಲ್ಲಿ ವ್ಯಕ್ತಿಯೊಬ್ಬರು ರಬ್ಬರ್ ಟ್ಯಾಪಿಂಗ್ಗೆ ಬಳಸುವ ಆಸಿಡ್ ಸೇವಿಸಿ ಮೃತಪಟ್ಟಿರುವ ಘಟನೆ ಸೆ.17ರಂದು ನಡೆದಿದೆ.
ಮೃತರನ್ನು ಎ. ಸುಂದರ (63) ಎಂದು ಗುರುತಿಸಲಾಗಿದೆ.
ಅವರು ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಪತ್ನಿ ಮೃತಪಟ್ಟ ಬಳಿಕ ಮಾನಸಿಕವಾಗಿ ನೊಂದುಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.
ಸೆ.17ರಂದು ಸಂಜೆ 7.15ರಿಂದ ರಾತ್ರಿ 9.20ರ ನಡುವಿನ ಅವಧಿಯಲ್ಲಿ ಮನೆಯಲ್ಲಿದ್ದ ರಬ್ಬರ್ ಟ್ಯಾಪಿಂಗ್ಗೆ ಬಳಸುವ ಆಸಿಡ್ ಸೇವಿಸಿದ ಬಳಿಕ ಮನೆಯ ಸಮೀಪದ ಅರಣ್ಯ ಪ್ರದೇಶದಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಸ್ಪತ್ರೆಯಲ್ಲಿ ರಾತ್ರಿ 11.46ಕ್ಕೆ ವೈದ್ಯರು ಪರೀಕ್ಷಿಸಿದಾಗ ಎ. ಸುಂದರ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೂಚನೆ: ಈ ವರದಿ ಪೊಲೀಸ್ ದಾಖಲೆಯಲ್ಲಿ ನೀಡಿರುವ ಮಾಹಿತಿಯನ್ನು ಆಧರಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.







