Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನೂತನ ಶಾಸಕರಿಗೆ ಇಂದಿನಿಂದ ತರಬೇತಿ: ವೀರೇಂದ್ರ ಹೆಗ್ಗಡೆ, ಮಹಮ್ಮದ್‌ ಕುಂಞಿ ಉಪನ್ಯಾಸ..!!

Dhrishya News by Dhrishya News
26/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಂಗಳೂರು : 16ನೇ ವಿಧಾನ‌ಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಸದೀಯ ಕಲಾಪದ ಕುರಿತು ಅರಿವು ಮೂಡಿಸಲು ನೆಲಮಂಗಲದಲ್ಲಿರುವ ‘ಕ್ಷೇಮವನ’ದಲ್ಲಿ (ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಆಯಂಡ್‌ ಯೋಗಿಕ್ ಸೈನ್ಸಸ್) ಸೋಮವಾರದಿಂದ (ಜೂನ್ 26) ಮೂರು ದಿನ ತರಬೇತಿ ಶಿಬಿರ ನಡೆಯಲಿದೆ.

ಶಿಬಿರವನ್ನು 26ರಂದು ಬೆಳಿಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ‌.ಜೆ.ಜಾರ್ಜ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿರಲಿದ್ದಾರೆ.

 

ಮೂರೂ ದಿನ ಬೆಳಿಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆ ನಡೆಯಲಿದೆ. 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಕಲಾಪದಲ್ಲಿ ಭಾಗವಹಿಸುವಿಕೆ, ನಿಲುವಳಿ ಸೂಚನೆ, ನಿಯಮ-69, ವಿಶ್ವಾಸ ಮತ್ತು ಅವಿಶ್ವಾಸ ನಿರ್ಣಯ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾರ್ಗದರ್ಶನ ನೀಡಲಿದ್ದಾರೆ.

 

ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆ ಹಾಗೂ ಅದರಲ್ಲಿ ಸದಸ್ಯರುಗಳ ಭಾಗವಹಿಸುವಿಕೆ ಮತ್ತು ಉಭಯ ಸದನಗಳ ಸಂಬಂಧ ಕುರಿತು ಮಾತನಾಡಲಿದ್ದಾರೆ. ಟಿ.ಬಿ.ಜಯಚಂದ್ರ ಅವರು ಶಾಸಕರ ಕರ್ತವ್ಯಗಳು, ಜವಾಬ್ದಾರಿ ಮತ್ತು ಹಕ್ಕುಬಾಧ್ಯತೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.‌

ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಸದಸ್ಯರು ಅಳವಡಿಸಿಕೊಳ್ಳಬೇಕಾದ ನೀತಿ ನಿಯಮಗಳು, ಪಾಲಿಸಬೇಕಾದ ನಿಯಮಗಳು ಸಂಸದೀಯ ಭಾಷೆಯ ಬಳಕೆ ಮತ್ತು ಜನ ಮೆಚ್ಚಿದ ಶಾಸಕನಾಗುವುದು ಹೇಗೆ ಎಂದು ತಿಳಿಸಿಕೊಡಲಿದ್ದಾರೆ.

ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯ ಭರಿತ ನಿರ್ವಹಣೆ ಕುರಿತು ‘ಮುಖ್ಯಮಂತ್ರಿ’ ಚಂದ್ರು‌ತಿಳಿಸಿಕೊಡಲಿದ್ದಾರೆ.ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಸಂವಾದ ನಡೆಸಲಿದ್ದಾರೆ.

ಮೊದಲ ದಿನ ಸಂಜೆ ಬ್ರಹ್ಮಕುಮಾರೀಸ್‌ ಸಂಸ್ಥೆಯ ಬಿ.ಕೆ.ವೀಣಾ ಮತ್ತು ಬಿ.ಕೆ.ಭುವನೇಶ್ವರಿ ‘ಹಿತವಚನ’ ನೀಡಲಿದ್ದಾರೆ. ‘ಸಾಮರಸ್ಯ ಸಮಾಜ’ ವಿಷಯದ ಕುರಿತು 27ರಂದು ಸಂಜೆ ಡಿ.ವೀರೇಂದ್ರ ಹೆಗ್ಗಡೆ, ಕೊನೆಯ ದಿನ ಬೆಳಿಗ್ಗೆ ‘ಜನಪ್ರತಿನಿಧಿ ಮತ್ತು ಜನರ ಮಧ್ಯೆ ಸಂಬಂಧ/ ಬಾಂಧವ್ಯವನ್ನು ವೃದ್ಧಿಗೊಳಿಸುವುದು’ ವಿಷಯದ ಕುರಿತು ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್‌ ಕುಂಞಿ ಮಾತನಾಡಲಿದ್ದಾರೆ.

Tags: #karnataka
Previous Post

ಕೋಟ – ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು..!!

Next Post

5 ತಿಂಗಳ ಪ್ರತಿಭಟನೆ ಅಂತ್ಯ ಹಾಡಿದ ಕುಸ್ತಿಪಟುಗಳು: ಕಾನೂನು ಹೋರಾಟಕ್ಕೆ ತೀರ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

5 ತಿಂಗಳ ಪ್ರತಿಭಟನೆ ಅಂತ್ಯ ಹಾಡಿದ ಕುಸ್ತಿಪಟುಗಳು: ಕಾನೂನು ಹೋರಾಟಕ್ಕೆ ತೀರ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved