Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ: ಬಸವರಾಜ ಬೊಮ್ಮಾಯಿ..!!

Dhrishya News by Dhrishya News
03/07/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು.

ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ ಎಂದು ಆರೋಪಿಸಿದರು.

ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್‌, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ‌ ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಾರೆ. ಸಿಎಂ ಕಚೇರಿ ನಡೆದುಕೊಳ್ಳುವ ರೀತಿ ನೋಡಿದರೆ ಭಯ ಆಗುತ್ತಿದೆ ಎಂದು ಹೇಳಿದರು.

ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಅವರು, ಇಲ್ಲಿ ಶಿಸ್ತಿನ ಪ್ರಶ್ನೆ ಇಲ್ಲ‌ ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷನಾಯಕನ ಆಯ್ಕೆಯಾಗಲಿದೆ‌. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ ಎಂದರು.ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿರುವುದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ತನಿಖೆ ಮಾಡಿಸಲಿ ಎಂದು ಹೇಳಿದರು.

Previous Post

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯರಿಂದ ಸ್ವಾಗತ..!!

Next Post

ನೈಜ ದುರ್ಬಲ ಬುಡಕಟ್ಟುಗಳ ಜನ ತಮ್ಮೊಳಗಿನ ಸಾಮರ್ಥ್ಯ ಒರೆಗೆ ಹಚ್ಚಿ ಶಿಕ್ಷಿತರಾಗಿ ಮುಂದೆ ಬರಬೇಕು – ರಾಷ್ಟಪತಿ ದ್ರೌಪದಿ ಮುರ್ಮು.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೈಜ ದುರ್ಬಲ ಬುಡಕಟ್ಟುಗಳ ಜನ ತಮ್ಮೊಳಗಿನ ಸಾಮರ್ಥ್ಯ ಒರೆಗೆ ಹಚ್ಚಿ ಶಿಕ್ಷಿತರಾಗಿ ಮುಂದೆ ಬರಬೇಕು - ರಾಷ್ಟಪತಿ ದ್ರೌಪದಿ ಮುರ್ಮು.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved