Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ-ರೋಟರಿ ಗ್ರಾಂಟ್ ಯೋಜನೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕ ಉಧ್ಘಾಟನೆ..!!

Dhrishya News by Dhrishya News
06/07/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನಿರ್ವಹಣೆಗೊಂಡ ರೋಟರಿ ಗ್ರಾಂಟ್ ಯೋಜನೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕವನ್ನು ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಈಚೆಗೆ ಉಧ್ಘಾಟಿಸಿ ಲೋಕಾರ್ಪಣೆ ಗೊಳಿಸಲಾಯಿತು.

ಆಸ್ಪತ್ರೆಯಲ್ಲಿ ಘಟಕವನ್ನು ಲೋಕಾರ್ಪಣೆಗೊಳಿಸಿದ ಬಳಿಕ ನಗರದ ಹೋಟೆಲ್ ಪ್ರಕಾಶ್ ನ ಉತ್ಸವ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಉಧ್ಘಾಟಕರಾದ ಅಂತರಾಷ್ಟ್ರೀಯ ರೋಟರಿಯ ಪೂರ್ವ ನಿರ್ದೇಶಕರಾದ ಡಾ. ಭರತ್ ಪಾಂಡ್ಯ ಕಾರ್ಕಳದಂತಹ ಪಟ್ಟಣಕ್ಕೆ ಅತ್ಯಾವಶ್ಯಕವಾಗಿದ್ದ ತುರ್ತು ಚಿಕಿತ್ಸಾ ಘಟಕದ ಯೋಜನೆಯನ್ನು ಸಾಕಾರಗೊಳೊಸುವಲ್ಲಿಕೈ ಜೋಡಿಸಿದ ಎಲ್ಲ ರೋಟರಿ ಕ್ಲಬ್ ಗಳ ಮತ್ತು ತಕ್ಷಣ ಸ್ಪಂದಿಸಿದ ದಾನಿಗಳನ್ನು ಕೊಂಡಾಡಿದರು.

ಕೇವಲ‌ಐದು ವರ್ಷದ ಕಿರಿಯ ಕ್ಲಬ್ ಗ್ಲೋಬಲ್ ಗ್ರಾಂಟ್ ಯೋಜನೆ ನಿರ್ವಹಿಸಿ ಅಸಾಮಾನ್ಯ ‌ಸಾಧನೆಗೈದ ರಾಕ್ ಸಿಟಿ ರೋಟರಿಗೆ ಹಾಗೂ ರೋಟರಿ ಆಸ್ಪತ್ರೆಗೆ ವಿಶೇಷ ಅಭಿನಂದನೆ‌ ಸಲ್ಲಿಸಿದರು.ಮಾತ್ರವಲ್ಲದೆ ಯೋಜನೆಗೆ ದೊಡ್ಡ ಮಟ್ಟದ ಧನಸಹಾಯ ಒದಗಿಸಿದ ಮೋಹನ್‌ ಶೆಣೈ ದಂಪತಿಗಳು, ಜಗನ್ನಾಥ ಪೈ ಜ್ಯೋತಿ ಪೈ ದಂಪತಿಗಳು ಹಾಗೂ ಯೋಗೀಶ್ ಪೈ ದಂಪತಿಗಳನ್ನು ಸರ್ವ ರೀತಿಯ ಶ್ಲಾಘನೆ ಅಭಿನಂದನೆಗಳೊಂದಿಗೆ ಸಮ್ಮಾನಿಸಿದರು. ಪ್ರಧಾನ‌ ಅತಿಥಿಗಳಲ್ಲಿ ಒಬ್ಬರಾಗಿದ್ದ ಮಣಿಪಾಲದ ಮಾಹೆಯ ಪ್ರೊ.ಚಾನ್ಸಲರ್ ಡಾ. ಹೆಚ್.ಎಸ್.ಬಲ್ಲಾಳ್ ರೋಟರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕ ಸ್ಥಾಪಿಸಲು‌ ಮನಮಾಡಿದ ಸರ್ವರನ್ನೂ ಅಭಿನಂದಿಸಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆಯನ್ನು‌ ಒದಗಿಸುವ ಭರವಸೆ ನೀಡಿದರು.

ರೋಟರಿ ಜಿಲ್ಲೆ 3182 ಗವರ್ನರ್ ಡಾ.ಜಯಗೌರಿ ಹಾದಿಗಲ್ ಉಪಸ್ಥಿತರಿದ್ದು ಕಾರ್ಕಳದ ಉಭಯ ರೋಟರಿ ಕ್ಲಬ್ ಗಳ ಸೇವಾ ಕೈಂಕರ್ಯವನ್ನು‌ ವಿಶೇಷವಾಗಿ ಕೊಂಡಾಡಿ ಹರಸಿದರಲ್ಲದೆ ಇತರ ರೋಟರಿಯೇತರ ದಾನಿಗಳನ್ನು ಮತ್ತು ಎರಡೂ ರೋಟರಿ ಕ್ಲಬ್ ಗಳ ಯೋಜನೆ ಮಂಜೂರಾದ ವರ್ಷದ ಅಧ್ಯಕ್ಷರು ಹಾಗೂ ಟಿಆರ್ ಎಫ್ ಅಧ್ಯಕ್ಷರುಗಳನ್ನು ಅಭಿನಂದಿಸಿದರು. ಮಾಜಿ ಗವರ್ನರ್ ಡಾ.ಪಿ.ನಾರಾಯಣ್ ಉಪಸ್ಥಿತರಿದ್ದು ಕಾರ್ಕಳದ ರೋಟರಿ ಕ್ಲಬ್ ಗಳು, ರೋಟರಿ ಆಸ್ಪತ್ರೆ ಹಾಗೂ ದಾನಿಗಳಿಗೆ ಕೃತಜ್ಞತೆಯ ಭಾವನೆ ವ್ಯಕ್ತಪಡಿಸಿದರು.ಇನ್ನೋರ್ವ ಅಮೇರಿಕಾದ ರೋಟರಿ ಕ್ಲಬ್ ನ ಸದಸ್ಯ, ಯೋಜನೆಗೆ ವೈಯಕ್ತಿಕವಾಗಿ‌ ದೊಡ್ಡ ಮೊತ್ತದ ದೇಣಿಗೆ ನೀಡಿದ. ರೊಟೇರಿಯನ್ ವಸಂತ ಪ್ರಭು ಇವರನ್ನು ಸಮ್ಮಾನಿಸಲಾಯಿತು.
ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ್ ಸ್ಥಾಪನೆಯಾದ ದಿನದಿಂದಲೂ ರೋಟರಿಯಿಂದ ಆಸ್ಪತ್ರೆಗೆ ಲಭ್ಯವಾದ ಕೊಡುಗೆಗಳನ್ನು ಸ್ಮರಿಸಿಕೊಂಡರು ಹಾಗೂ ಹೊಸ ಕೊಡುಗೆಗಾಗಿ ಅಬಿನಂದನೆ ಹಾಗೂ‌ ಅಭಿವಂದನೆಯ ನುಡಿಗಳನ್ನಾಡಿದರು.

ಸಂಜನಾ ಜೈನ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ರಾಕ್ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಚಿರಾಗ್ ರಾವ್ ಸ್ವಾಗತಿಸಿದರು.ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಯೋಜನೆ ಅನುಷ್ಠಾನಕ್ಕಾಗಿ ಬಹುವಾಗಿ ಶ್ರಮಿಸಿದ ಕ್ಲಬ್ ನ ಮಾಜಿ ಅಧ್ಯಕ್ಷ ರೊ.ಸುರೇಂದ್ರ ನಾಯಕ್ ಪ್ರಮುಖ ದಾನಿಗಳ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು.ನಿಕಟಪೂರ್ವ‌ ಅಧ್ಯಕ್ಷ ಪ್ರಕಾಶ್ ಪೈ ಇತರ ದಾನಿಗಳ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಪ್ರಶಾಂತ. ಬಿಳಿರಾಯ ಹಾಗೂ ಗಣೇಶ್ ಬರ್ಲಾಯ ಅತಿಥಿಗಳ ಪರಿಚಯ ನೀಡಿದರು.ಯೋಜನೆ ಯ ಲೆಕ್ಕತಪಾಸಣೆಯನ್ನು‌ ಉಚಿತವಾಗಿ ನಡೆಸಿದ ಸಿಎ ಪ್ರಭಾತ್ ರನ್ನು‌ ಹಾಗೂ ಯೋಜನೆಯನ್ನು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಟೇಶ್ ರನ್ನು‌ ಗುರುತಿಸಿ ಅಭಿನಂದಿಸಲಾಯಿತು.

23-24 ನೇ ಸಾಲಿನ‌ ನಿಯೋಜಿತ ಅಧ್ಯಕ್ಷ ಸುರೇಶ್ ನಾಯಕ್ ಧನ್ಯವಾದ ಅರ್ಪಿಸಿದರೆ, ಶ್ರೀವರ್ಮ‌ಅಜ್ರಿ ಕಾರ್ಯಕ್ರಮ ನಿರೂಪಿಸಿದರು.

Previous Post

ಮಾಳ:ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಕ್ರಮ..!!

Next Post

ಉಡುಪಿ : ಜಲಾವೃತಗೊಂಡ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಲಾವೃತಗೊಂಡ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved