Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಳೆಯ ಅಬ್ಬರಕ್ಕೆ ಕುಂದಾಪುರ, ಬೈಂದೂರು ತತ್ತರ..!!

Dhrishya News by Dhrishya News
24/07/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಜಿಲ್ಲೆಯಾದ್ಯಂತ ಮಳೆಯೊಂದಿಗೆ ವೇಗವಾಗಿ ಬೀಸುತ್ತಿರುವ ಗಾಳಿಯ ಒತ್ತಡವೂ ಸೇರಿಕೊಂಡಿದ್ದು, ತಾಲ್ಲೂಕಿನಲ್ಲಿ ಹರಿಯುತ್ತಿರುವ ಸೌಪರ್ಣಿಕಾ, ವಾರಾಹಿ, ಗಂಗಾವಳಿ ಮುಂತಾದ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ನದಿ ನೀರಿನ ಬಣ್ಣ ಮಣ್ಣಿನ ಕೆಂಪು ಬಣ್ಣಕ್ಕೆ ತಿರುಗಿದೆ. ಘಟ್ಟದ ಮೇಲ್ಭಾಗದಲ್ಲಿಯೂ ಮಳೆಯಾಗುತ್ತಿರುವುದರಿಂದ ಪಶ್ಚಿಮ ಘಟ್ಟಗಳ ಮೇಲ್ಭಾಗದಿಂದ ಹರಿದು ಬರುವ ನೀರು ಕರಾವಳಿ ಭಾಗದ ನದಿಯನ್ನು ಸೇರಿ ನೆರೆ ಹಾಗೂ ಪ್ರವಾಹದ ಆತಂಕವನ್ನು ಹೆಚ್ಚಿಸುತ್ತಿದೆ.

ಸೌಪರ್ಣಿಕಾ ನದಿ ಹರಿಯುವ ಅಕ್ಕ-ಪಕ್ಕ ಪ್ರದೇಶಗಳಾದ ನಾವುಂದ ಸಾಲ್ಬುಡ, ಮರವಂತೆ, ನಾಡಾ ಗ್ರಾಮ ಪಂಚಾಯಿತಿಯ ಬಡಾಕೆರೆ, ಕಡ್ಕೆ, ಪಡುಕೋಣೆ, ಹಡವು, ತೆಂಗಿನ ಗುಂಡಿ, ಸೇನಾಪುರ, ಕುಂಬಾರಮಕ್ಕಿ, ಕಟ್ಟು, ಹಕ್ಲಾಡಿ ಗ್ರಾಮದ ಬಟ್ಟೆಕುದ್ರು, ಯಳೂರು, ತಪ್ಲು, ಕುಂದಾಪುರದ ಆನಗಳ್ಳಿ, ಬಳ್ಕೂರು ಮುಂತಾದ ಪ್ರದೇಶಗಳು ಜಲಾವೃತವಾಗಿದೆ.

ತೋಟ ಗದ್ದೆಗಳನ್ನು ದಾಟಿ ನೆರೆಯ ನೀರು ಮನೆಯಂಗಳಕ್ಕೆ ಬಂದಿರುವುದರಿಂದ, ಮನೆಯ‌ ಸುತ್ತೆಲ್ಲ ನೀರು ನಿಂತು ದ್ವೀಪದ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್‌ ಹಾಗೂ ಕಂದಾಯ ಇಲಾಖೆಯಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ನೆರೆಯ‌ ನೀರಿನಲ್ಲಿ ಸಿಲುಕಿದ ಜಾನುವಾರುಗಳನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿರುವ ಘಟನೆಯೂ ನಡೆದಿದೆ. ಮನೆಗೆ ತೆರಳುವ ರಸ್ತೆ ಹಾಗೂ ಕಾಲ್ನಡಿಗೆಯ ದಾರಿಗಳಲ್ಲಿ ನೆರೆ ನೀರು ತುಂಬಿರುವುದರಿಂದಾಗಿ ಸ್ಥಳೀಯರು ಸಂಚಾರಕ್ಕಾಗಿ ದೋಣಿ ವ್ಯವಸ್ಥೆಗೆ ಮೊರೆ ಹೋಗಿದ್ದಾರೆ.

ಪ್ರತಿ ವರ್ಷವೂ ಮಳೆಗಾಲದ ಸಂದರ್ಭದಲ್ಲಿ ನೆರೆಯ ತೊಂದರೆಯನ್ನು ಅನುಭವಿಸುತ್ತಿರುವ ಬೈಂದೂರು ತಾಲ್ಲೂಕಿನ ನಾವುಂದ ಗ್ರಾಮದ ಕುದ್ರು ಭಾಗದ ನೂರಕ್ಕೂ ಅಧಿಕ‌ ಮನೆಯವರು 4-5 ದಿನಗಳ ಕಾಲ ಮನೆ ಬಿಟ್ಟು ಹೊರ ಬರಲಾಗದ ದುಃಸ್ಥಿತಿ‌ ಅನುಭವಿಸುತ್ತಾರೆ.‌

ಹಿಡಿ ಉಪ್ಪು, ದಿನಸಿ, ತರಕಾರಿ ಸೇರಿದಂತೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಬೇಕಾದರೂ ಕೂಡ ದೋಣಿಯನ್ನೇ ಆಶ್ರಯಿಸಿ, ತುಂಬಿ ಹರಿಯುವ ನೀರಿನ ನಡುವೆ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಇಲ್ಲಿಗೊಂದು ತೂಗು ಸೇತುವೆ ಮಾಡಿ ಕೊಡಿ ಎಂದು ಆಗ್ರಹಿಸುತ್ತಿದ್ದರೂ, ಸಮಸ್ಯೆಗೆ ಸ್ಪಂದನ ದೊರಕುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Previous Post

ಹೂವು – ಹಣ್ಣುಗಳ ಗಿಡಗಳ ಉಚಿತ ವಿತರಣಾ ಮೇಳ ‘ಸಸ್ಯೋತ್ಸವಕ್ಕೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಚಾಲನೆ..!!

Next Post

ಉಳ್ಳಾಲ:ಮೊಬೈಲ್ ನೋಡಿಕೊಂಡೇ ಬೇಜವಾಬ್ದಾರಿಯುತವಾಗಿ ಬಸ್ ಚಲಾಯಿಸಿದ ಚಾಲಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ:ಮೊಬೈಲ್ ನೋಡಿಕೊಂಡೇ ಬೇಜವಾಬ್ದಾರಿಯುತವಾಗಿ ಬಸ್ ಚಲಾಯಿಸಿದ ಚಾಲಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026