Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ವೈರಲ್ ಹೆಪಟೈಟಿಸ್ ಕುರಿತು ಕಾರ್ಯಾಗಾರ..!! 

Dhrishya News by Dhrishya News
28/07/2023
in मौसम
0
0
SHARES
33
VIEWS
Share on FacebookShare on Twitter

ಮಣಿಪಾಲ, 23ನೇ ಜುಲೈ 2023: ವೈರಲ್ ಹೆಪಟೈಟಿಸ್ ಬಗ್ಗೆ ಜಾಗೃತಿ ಮೂಡಿಸಲು, ತಡೆಗಟ್ಟುವ ಕ್ರಮಗಳನ್ನು ಉತ್ತೇಜಿಸಲು ಮತ್ತು ರೋಗದ ತಪಾಸಣೆ ಮತ್ತು ಚಿಕಿತ್ಸೆಯನ್ನು ಪ್ರೋತ್ಸಾಹಿಸಲು ಪ್ರತೀ ವರ್ಷ ಜುಲೈ 28 ರಂದು ವಿಶ್ವ ಹೆಪಟೈಟಿಸ್ ದಿನವನ್ನಾಗಿ ಜಾಗತಿಕವಾಗಿ ಆಚರಿಸಲಾಗುತ್ತದೆ. ವಿಶ್ವ ಹೆಪಟೈಟಿಸ್ ದಿನದ ಈ ವರ್ಷದ ಘೋಷ ವಾಕ್ಯ ‘ನಾವು ಕಾಯುತ್ತಿಲ್ಲ’. ಈ ರೋಗದ ಬಗ್ಗೆ ತಿಳಿದಿಲ್ಲದ ಜನರು ತಕ್ಷಣ ಪರೀಕ್ಷೆಗೆ ಒಳಗಾಗಬೇಕು ಮತ್ತು ತಕ್ಷಣವೇ ಜೀವರಕ್ಷಕ ಚಿಕಿತ್ಸೆಯನ್ನು ಪಡೆಯಬೇಕು ಎಂಬುದನ್ನು ಇದು ಸೂಚಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯು 2030 ರ ವೇಳೆಗೆ ಹೆಪಟೈಟಿಸ್ ಕಾಯಿಲೆಯನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ.

 

ಇದರ ಭಾಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸರಕಾರಿ ವೈದ್ಯರಿಗೆ ವೈರಲ್ ಹೆಪಟೈಟಿಸ್ ಕುರಿತು ಕಾರ್ಯಾಗಾರವನ್ನು ಆಯೋಜಿಸಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಎಚ್ ಅವರು ಮಾತನಾಡಿ, “ ಭಾರತದಲ್ಲಿ ಬಹಳಷ್ಟು ಜನರು ದಿನಂಪ್ರತಿ ಹೆಪಟೈಟಿಸ್ ವೈರಾಣು ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದನ್ನು ಹೊಗಲಾಗಿಸಲು ಈ ರೋಗದ ಬಗ್ಗೆ ತಿಳಿದಿಲ್ಲದ ಜನರು ತಕ್ಷಣ ಪರೀಕ್ಷೆಗೆ ಒಳಗಾಗಬೇಕು ಮತ್ತು ತಕ್ಷಣವೇ ಜೀವರಕ್ಷಕ ಚಿಕಿತ್ಸೆಯನ್ನು ಪಡೆಯಬೇಕು. ಇಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರಿಗೆ ಇದರ ಕುರಿತು ಜ್ಞಾನ ಮೂಡಿಸಲು ಈ ಕಾರ್ಯಾಗಾರವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹಯೋಗದಲ್ಲಿ ಆಯೋಜಿಸಿದ್ದೇವೆ. ತಾವೆಲ್ಲ ವೈದ್ಯರು ಇದರ ಪ್ರಯೋಜನ ಪಡೆದುಕೊಂಡು ಸಮುದಾಯದಲ್ಲಿ ಹೆಪಟೈಟಿಸ್ ಸೋಂಕುವಿನ ಬಗ್ಗೆ ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವಲ್ಲಿ ನೆರವಾಗಬೇಕು” ಎಂದು ಹೇಳಿದರು.

 

ಡಾ ಆನಂದ್ ವೇಣುಗೋಪಾಲ್, ಸಿಒಒ- ಬೋಧನಾ ಆಸ್ಪತ್ರೆ ಮಾಹೆ ಮಣಿಪಾಲ, ಡಾ ಅವಿನಾಶ್ ಶೆಟ್ಟಿ- ವೈದ್ಯಕೀಯ ಅಧೀಕ್ಷಕರು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ ಚಿದಾನಂದ ಸಂಜು ಎಸ್ ವಿ – ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ ಅಧಿಕಾರಿ ಹಾಗೂ ಡಾ ಶಿರನ್ ಶೆಟ್ಟಿ, ಮುಖ್ಯಸ್ಥರು – ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಗೌರವ ಸಲಹೆಗಾರರು & ವಿಷಯ ತಜ್ಞರು- ಉಡುಪಿ ಜಿಲ್ಲಾ ವೈರಲ್ ಹೆಪಟೈಟಿಸ್ ನಿಯಂತ್ರಣ ಸಮಿತಿ ಇವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಶಿರನ್ ಶೆಟ್ಟಿ, ಪ್ರಾಧ್ಯಾಪಕ ಡಾ.ಗಣೇಶ್ ಭಟ್, ಬೆಂಗಳೂರಿನ ನಿಮ್ಹಾನ್ಸ್ ನ ನ್ಯೂರೋವೈರಾಲಜಿ ವಿಭಾಗದ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ.ಅಶ್ವಿನಿ ಎಂ.ಎ. ಕೆ ಎಂ ಸಿ ಮಣಿಪಾಲದ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರಾದ ಡಾ. ಚೈತ್ರ ಆರ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.

 

ಡಾ ದಿವ್ಯಾ ಅರವಿಂದ್ ಪ್ರಭು ಅವರು ಕಾರ್ಯಾಗಾರದ ಪರಿಚಯ ನೀಡಿ ಕಾರ್ಯಕ್ರಮ ನಿರೂಪಿಸಿದರು.

Previous Post

ಉಡುಪಿ :ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ:ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!!

Next Post

ಉಡುಪಿ:ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026