Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗಣನೀಯ ಸೇವೆ ಸಲ್ಲಿಸಿದ 954 ಸಿಬ್ಬಂದಿಗೆ 230 ಶೌರ್ಯ ಪದಕ ಸೇರಿದಂತೆ ರಾಷ್ಟ್ರಪತಿಗಳ ಪೊಲೀಸ್ ಪದಕ..!!

Dhrishya News by Dhrishya News
15/08/2023
in ಮುಖಪುಟ, ಸುದ್ದಿಗಳು
0
0
SHARES
2
VIEWS
Share on FacebookShare on Twitter

ನವದೆಹಲಿ :ಗಣನೀಯ ಸೇವೆ ಸಲ್ಲಿಸಿದ 954 ಸಿಬ್ಬಂದಿಗೆ ರಾಷ್ಟ್ರಪತಿಯವರ ಪೊಲೀಸ್ ಪದಕವನ್ನು ಕೇಂದ್ರ ಸರ್ಕಾರವು ಸ್ವಾತಂತ್ರ್ಯೋತ್ಸವದ ಮುನ್ನಾ ದಿನವಾದ ಸೋಮವಾರ ಘೋಷಿಸಿದೆ

ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಎಲ್‌. ಇಬೊಮ್‌ಚಾ ಸಿಂಗ್‌ ಅವರು ಈ ಬಾರಿ ರಾಷ್ಟ್ರಪತಿಯವರ ಪೊಲೀಸ್‌ ಶೌರ್ಯ ಪದಕ (PPMG) ಪಡೆದ ಏಕೈಕ ಸಿಬ್ಬಂದಿಯಾಗಿದ್ದಾರೆ.

ಉಳಿದಂತೆ 229 ಸಿಬ್ಬಂದಿಯನ್ನು ಪೊಲೀಸ್‌ ಶೌರ್ಯ ಪದಕಕ್ಕೆ, ವಿಶಿಷ್ಟ ಸೇವೆಗಾಗಿ 82 ಸಿಬ್ಬಂದಿಯನ್ನು ರಾಷ್ಟ್ರಪತಿಯವರ ಪೊಲೀಸ್‌ ಪದಕಕ್ಕೆ ಹಾಗೂ ಶ್ಲಾಘನೀಯ ಸೇವೆಗಾಗಿ 642 ಸಿಬ್ಬಂದಿಯನ್ನು ಪೊಲೀಸ್‌ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ರಾಷ್ಟ್ರಪತಿಯವರ ಪೊಲೀಸ್‌ ಶೌರ್ಯ ಪದಕ ಹಾಗೂ ಪೊಲೀಸ್‌ ಶೌರ್ಯ ಪದಕಕ್ಕೆ ಕರ್ನಾಟಕದ ಯಾವೊಬ್ಬ ಸಿಬ್ಬಂದಿಯೂ ಆಯ್ಕೆಯಾಗಿಲ್ಲ. ಆದರೆ, ವಿಶಿಷ್ಟ ಸೇವೆಗಾಗಿನ ರಾಷ್ಟ್ರಪತಿಯವರ ಪೊಲೀಸ್‌ ಪದಕಕ್ಕೆ ಇಬ್ಬರು ಮತ್ತು ಶ್ಲಾಘನೀಯ ಸೇವೆಗಾಗಿ 18 ಮಂದಿ ಪೊಲೀಸ್‌ ಪದಕಕ್ಕೆ ಆಯ್ಕೆಯಾಗಿದ್ದಾರೆ.

 

ಶೌರ್ಯ ಪದಕಕ್ಕೆ ಆಯ್ಕೆಯಾದವರ ಪೈಕಿ 125 ಸಿಬ್ಬಂದಿ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ, 71 ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ 11 ಮಂದಿ ಈಶಾನ್ಯ ರಾಜ್ಯಗಲ್ಲಿ ಸೇವೆ ಸಲ್ಲಿಸಿದವರಾಗಿದ್ದಾರೆ.

 

ಪೊಲೀಸ್‌ ಶೌರ್ಯ ಪದಕ ಪಡೆದವರಲ್ಲಿ ಹೆಚ್ಚಿನವರು (55 ಮಂದಿ) ಜಮ್ಮು ಮತ್ತು ಕಾಶ್ಮೀರ ಪೊಲೀಸರು. ಉಳಿದಂತೆ ಮಹಾರಾಷ್ಟ್ರದ 33 ಸಿಬ್ಬಂದಿ, ಸಿಆರ್‌ಪಿಎಫ್‌ನ 28 ಸಿಬ್ಬಂದಿ, ಛತ್ತೀಸಗಢದ 24 ಸಿಬ್ಬಂದಿ, ತೆಲಂಗಾಣದ 22 ಸಿಬ್ಬಂದಿ ಹಾಗೂ ಆಂಧ್ರಪ್ರದೇಶದ 18 ಸಿಬ್ಬಂದಿ ಇದ್ದಾರೆ.

 

ಬಿಎಸ್‌ಎಫ್‌ನ ನಾಲ್ವರು ಪೊಲೀಸ್‌ ಶೌರ್ಯ ಪದಕ ಹಾಗೂ ಐವರು ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಯವರ ಪೊಲೀಸ್‌ ಪದಕ ಪಡೆದಿದ್ದಾರೆ. ಶ್ಲಾಘನೀಯ ಸೇವೆಗಾಗಿ 46 ಮಂದಿ ಪೊಲೀಸ್‌ ಪದಕಕ್ಕೆ ಆಯ್ಕೆಯಾಗಿದ್ದಾರೆ.

 

ಸಿಬಿಐನ 6 ಮಂದಿ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಯವರ ಪೊಲೀಸ್‌ ಪದಕ ಮತ್ತು ಶ್ಲಾಘನೀಯ ಸೇವೆಗಾಗಿ 46 ಮಂದಿ ಪೊಲೀಸ್‌ ಪದಕ ಪಡೆದಿದ್ದಾರೆ.

 

 

Previous Post

ಗೃಹ ರಕ್ಷಕ ದಳ ಹಾಗೂ ಪೌರರಕ್ಷಣ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ..!!

Next Post

77ನೇ ಸ್ವಾತಂತ್ರ್ಯೋತ್ಸವ – ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

77ನೇ ಸ್ವಾತಂತ್ರ್ಯೋತ್ಸವ - ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025

Recent News

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved