Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸೂಕ್ಷ್ಮ ಅರಣ್ಯ ವಲಯದಲ್ಲಿ ನಟ ಗಣೇಶ್ ಕಟ್ಟಡ – ಅರಣ್ಯ ಇಲಾಖೆ ನೋಟಿಸ್ ಬೆನ್ನಲ್ಲೇ’ಕಾಮಗಾರಿ ಸ್ಥಗಿತ’

Dhrishya News by Dhrishya News
18/08/2023
in ಮುಖಪುಟ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೇ ನಂಬರ್ 105ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ 1 ಎಕರೆ 24 ಗುಂಟೆ ಜಮೀನು ಹೊಂದಿದ್ದರು. ಇಲ್ಲಿ ತೋಟಗಾರಿಕೆ ಉದ್ದೇಶದಿಂದ ತಾತ್ಕಾಲಿಕವಾಗಿ ಮನೆ ನಿರ್ಮಾಣ ಮಾಡೋದಕ್ಕೆ ಬಂಡೀಪುರ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿಯಿಂದ ಅನುಮತಿ ನೀಡಲಾಗಿತ್ತು. ಆದ್ರೇ ಅವರು ಸೂಕ್ಷ್ಮ ವಲಯದಲ್ಲೇ ಬೃಹತ್ ಕಟ್ಟಡ ನಿರ್ಮಿಸಲು ಸಿದ್ಧತೆ ಕೈಗೊಂಡಿದ್ದರು.

ಈ ಹಿನ್ನಲೆಯಲ್ಲಿ ನಟ ಗಣೇಶ್ ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶವಿಲ್ಲ. ಕೂಡಲೇ ಕ್ರಮ ಕೈಗೊಳ್ಳುವಂತೆ ಅನೇಕ ಪರಿಸರವಾದಿಗಳು ಒತ್ತಾಯಿಸಿದ್ದರು.

ಈ ಬಳಿಕ ಬಂಡೀಪುರ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಮಾಧಿಕಾರಿ ರವೀಂದ್ರ ಅವರು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪಿ.ರಮೇಶ್ ಕುಮಾರ್ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ, ನಟ ಗಣೇಶ್ ಗೆ ಅರಣ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಕೂಡಲೇ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿತ್ತು.

ಬಂಡೀಪುರ ಪರಿಸರ ಸೂಕ್ಷ್ಮ ವಲಯದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ನೀಡಿರುವ ನಿಬಂಧನೆಗಳನ್ನು ಹಾಗೂ ನೀವು ಮುಚ್ಚಳಿಕೆ ಪತ್ರದಲ್ಲಿ ಬರೆದುಕೊಟ್ಟಿರುವ ಷರತ್ತುಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿತ್ತು.

ಈ ಕಟ್ಟಡಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು (ಕಟ್ಟಡದ ಅನುಮೋದಿತ ನೀಲ ನಕ್ಷೆ, ಕಂದಾಯ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳಿಂದ ತಾತ್ಕಾಲಿಕ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ) ಪತ್ರ ತಲುಪಿದ ಏಳು ದಿನಗಳ ಒಳಗಾಗಿ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರ ಮುಂದೆ ಹಾಜರು ಪಡಿಸಲು ಮತ್ತು ಮುಂದಿನ ಆದೇಶವರೆಗೆ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಿತ್ತು.

ಈ ನೋಟಿಸ್ ಗೆ 7 ದಿನಗಳ ಒಳಗಾಗಿ ಉತ್ತರಿಸುವಂತೆ ಇದೇ ಆಗಸ್ಟ್.14ರಂದು ಗೋಲ್ಡನ್ ಸ್ಟಾರ್ ಗಣೇಶ್ ಗೆ ಅರಣ್ಯ ಇಲಾಖೆ ಹೊರಡಿಸಿರುವಂತ ನೋಟಿಸ್ ನಲ್ಲಿ ತಿಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಟ ಗಣೇಶ್ ಅವರು ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

Previous Post

ಗಗನಕ್ಕೇರಿದ್ದ ಟೊಮೆಟೊ ಬೆಲೆ ಒಂದು ವಾರದಲ್ಲಿ ಅರ್ಧದಷ್ಟು ಇಳಿಕೆ..!!

Next Post

ಕಾರ್ಕಳ : ನಾಗರ ಪಂಚಮಿಗೆ ಶಾಲಾ- ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಸುನಿಲ್ ಕುಮಾರ್ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ನಾಗರ ಪಂಚಮಿಗೆ ಶಾಲಾ- ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಸುನಿಲ್ ಕುಮಾರ್ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026