Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸ್ವಚ್ಛ ಲಕ್ಕಿ ಕೃಷ್ಣ 2023′ ಸ್ಪರ್ಧೆ ವಿಜೇತರ ಘೋಷಣೆ – ಸ್ಪಂದನಾ ಪುನರ್ವಸತಿ ಕೇಂದ್ರದಲ್ಲಿ ಲಕ್ಕಿ ಡ್ರಾ…!!

Dhrishya News by Dhrishya News
09/09/2023
in ಕರಾವಳಿ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ : ಉಡುಪಿ ಮತ್ತು ಮಂಗಳೂರು ಪ್ರದೇಶದಲ್ಲಿ ಮನೆಗೆಲಸ ಮತ್ತು ನಿರ್ವಹಣಾ ಸೇವೆಗಳನ್ನು ಒದಗಿಸುವ ಪ್ರಮುಖ ಕಂಪನಿಯಾದ ಸ್ವಚ್ಛಂ ಕ್ಲೀನಿಂಗ್ ಸರ್ವೀಸಸ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಗುರುವಾರ ನಡೆಸಿದ ‘ಸ್ವಚ್ಛಮ್ ಲಕ್ಕಿ ಕೃಷ್ಣ 2023’ ಸ್ಪರ್ಧೆಯ ವಿಜೇತರನ್ನು ಘೋಷಿಸಿದೆ.

ಉಡುಪಿ ಸಂತೆಕಟ್ಟೆ ನೇಜಾರಿನ ಸ್ಪಂದನಾ ಪುನರ್ವಸತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳ ಉಪಸ್ಥಿತಿಯಲ್ಲಿ ನಡೆದ ಸುಂದರ ಸಮಾರಂಭದಲ್ಲಿ ವಿಜೇತರನ್ನು ಘೋಷಿಸಲಾಯಿತು.

ಹಲವು ಕಡೆಗಳಿಂದ 1000ಕ್ಕೂ ಹೆಚ್ಚು ಪ್ರವೇಶಗಳನ್ನು ಸ್ವೀಕರಿಸಲಾಗಿತ್ತು. ವಾಸ್ತವಿಕವಾಗಿ ಇದೊಂದು ವೇಷಭೂಷಣ ಸ್ಪರ್ಧೆಯಾಗಿತ್ತು. ಅದರ ಸ್ಪರ್ಧಿಗಳಾಗಿರುವ ಮಕ್ಕಳು ಕೃಷ್ಣನಂತೆ ವೇಷ ಧರಿಸಿರುವ ತಮ್ಮ ಚಿತ್ರಗಳನ್ನು ಕಳುಹಿಸಬೇಕಾಗಿತ್ತು. ವಾಟ್ಸ್ ಆಪ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರವೇಶಗಳನ್ನು ಸ್ವೀಕರಿಸಲಾಯಿತು.

ಮಂಗಳೂರು, ಉಡುಪಿ, ಬೆಂಗಳೂರು, ಮುಂಬೈ ಮತ್ತು ಯುಎಇ ಸಹಿತ ದೇಶ-ವಿದೇಶಗಳಿಂದ ಸಾವಿರಾರು ಜನರು ಈ ಅನನ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಈ ಸ್ಪರ್ಧೆಯು ವಿಶೇಷವಾಗಿತ್ತು. ಸಾಮಾನ್ಯವಾಗಿ ಇಂತಹ ಸ್ಪರ್ಧೆಗಳಲ್ಲಿ ತೀರ್ಪುಗಾರರು ವಿಜೇತರನ್ನು ಆಯ್ಕೆ ಮಾಡುತ್ತಾರೆ. ಇದಕ್ಕೆ ಭಿನ್ನವಾಗಿ ಇಲ್ಲಿ ಅದೃಷ್ಟದ ಚೀಟಿಯ ಡ್ರಾ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು ಮತ್ತು ಮೂವರು ಅದೃಷ್ಟಶಾಲಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.

ಯುವ ಉದ್ಯಮಿ, ಸಮಾಜ ಸೇವಕ ಪ್ರಸಾದ್ ರಾಜ್ ಕಾಂಚನ್ ಅವರು ಉಡುಪಿಯ ತಮ್ಮ ಪ್ರಧಾನ ಕಚೇರಿಯಲ್ಲಿ ಸ್ವಚ್ಛಂ ಕ್ಲೀನಿಂಗ್ ಸರ್ವೀಸಸ್ ಪಾಲುದಾರರು ಮತ್ತು ಆಡಳಿತ ಮಂಡಳಿಯ ಸದಸ್ಯರೊಂದಿಗೆ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ಪ್ರಸಾದ್ ರಾಜ್ ಕಾಂಚನ್ ಅವರು ಮಾತನಾಡಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳು ಮತ್ತು ಅವರ ಪೋಷಕರನ್ನು ಅಭಿನಂದಿಸಿದರು. ಹೆಚ್ಚಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ತಮ್ಮ ಮಕ್ಕಳನ್ನು ಪ್ರೋತ್ಸಾಹಿಸುವಂತೆ ಪೋಷಕರನ್ನು ಒತ್ತಾಯಿಸಿದರು. ಲಾಭೋದ್ದೇಶವಿಲ್ಲದ, ಸಾಮಾಜಿಕ ಸೇವಾ ವ್ಯಾಪ್ತಿಯ ತಮ್ಮ ಉಪಕ್ರಮದ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಸ್ವಚ್ಛ ಕ್ಲೀನಿಂಗ್ ಸರ್ವೀಸಸ್ ತಂಡದ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

 

ಸ್ವಚ್ಛಂ ನಿರ್ವಹಣಾ ತಂಡದ ತಾರಾನಾಥ ಪೂಜಾರಿ ಮಾತನಾಡಿ, “ಸ್ಪಂದನಾ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಈ ಪವಿತ್ರ ಹಬ್ಬವನ್ನು ಆಚರಿಸುವುದು ನಮ್ಮ ಸೌಭಾಗ್ಯವಾಗಿದೆ. ನಮ್ಮ ಸ್ಪರ್ಧೆಗೆ ಇಷ್ಟು ಉತ್ತಮ ಪ್ರತಿಕ್ರಿಯೆಯನ್ನು ಪಡೆದಿರುವುದರಿಂದ ನಾವು ರೋಮಾಂಚನಗೊಂಡಿದ್ದೇವೆ. ಕೇವಲ ಒಂದು ವಾರದ ಅಲ್ಪಾವಧಿಯಲ್ಲಿ 1000ಕ್ಕೂ ಹೆಚ್ಚು ಪ್ರವೇಶಗಳನ್ನು ಸ್ವೀಕರಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕಾಗಿ ನಾವು ಎಲ್ಲ ಪೋಷಕರು ಮತ್ತು ಸ್ಪರ್ಧಿಗಳನ್ನು ಅಭಿನಂದಿಸುತ್ತೇವೆ ಮತ್ತು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಈ ಸ್ಪರ್ಧೆಯ ಅದೃಷ್ಟಶಾಲಿ ವಿಜೇತರನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ ಮತ್ತು ಪಾಲ್ಗೊಂಡ ಎಲ್ಲರಿಗೂ ಬಹುಮಾನಗಳು ಮತ್ತು ಭಾಗವಹಿಸುವಿಕೆ ಪ್ರಮಾಣಪತ್ರಗಳನ್ನು ಶೀಘ್ರದಲ್ಲೇ ಕಳುಹಿಸುತ್ತೇವೆ ಎಂದು ಘೋಷಿಸಿದರು.

ಮೂವರು ಅದೃಷ್ಟಶಾಲಿ ವಿಜೇತರನ್ನು ಆಯ್ಕೆ ಮಾಡಲಾಗಿದೆ ಮತ್ತು ಈ ವಿಜೇತರಿಗೆ ರೂ. 12,000 ಮೌಲ್ಯದ ನಗದು ಬಹುಮಾನಗಳು ಮತ್ತು ಪ್ರಮಾಣಪತ್ರಗಳನ್ನು ನೀಡಲಾಗುವುದು.

ವಿಜೇತರು
1. ದರ್ಶಿಕಾ ಕೆ. ಪೂಜಾರಿ, ಬೆಂಗಳೂರು (# 560)
2. ಯಶ್ವಿತ್ ಎಸ್., ಬ್ರಹ್ಮಾವರ (#1161)
3. ಅದಿತ್ರಿ, ಮುಕ್ಕ (# 695)

ವಿಜೇತರಿಗೆ ಅಭಿನಂದನೆಗಳು!!
ಎಲ್ಲ ಸ್ಪರ್ಧಿಗಳೂ ಅಂಚೆ ಮೂಲಕ ಭಾಗವಹಿಸುವಿಕೆ ಪ್ರಮಾಣಪತ್ರಗಳನ್ನು ಸ್ವೀಕರಿಸುತ್ತಾರೆ.

ಸ್ವಚ್ಛಂ ಕ್ಲೀನಿಂಗ್ ಸರ್ವಿಸಸ್ ವಸತಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಶುಚಿಗೊಳಿಸುವ ಮತ್ತು ಮನೆಗೆಲಸದ ಸೇವೆಗಳ ಪ್ರಮುಖ ಪೂರೈಕೆದಾರ ಸಂಸ್ಥೆಯಾಗಿದೆ. ಈ ವ್ಯವಹಾರದಲ್ಲಿ ಒಂದು ದಶಕಕ್ಕೂ ಹೆಚ್ಚು ಅನುಭವ ಹೊಂದಿರುವ ಕಂಪನಿಯು ಉತ್ತಮ ತರಬೇತಿ ಪಡೆದ ಸಿಬ್ಬಂದಿಯನ್ನು ಹೊಂದಿದ್ದು, ವೃತ್ತಿಪರ ಮತ್ತು ಯಂತ್ರಚಾಲಿತ ಶುಚಿಗೊಳಿಸುವ ಸೇವೆಗಳಿಗೆ ಅತ್ಯಂತ ವಿಶ್ವಾಸಾರ್ಹ ಹೆಸರಾಗಿದೆ.

ಸುನೀಲ್ ಕುಮಾರ್, ಮಿಥಿಲೇಶ್, ಬ್ರಾನ್ ಡಿ’ಸೋಜಾ, ಗುರುಪ್ರಸಾದ್ ಅವರು ಲಕ್ಕಿ ಡ್ರಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಹಬ್ಬದೂಟವನ್ನು ಉಣಬಡಿಸಲಾಯಿತು.

Tags: #udupi#muddukrishna#astami
Previous Post

ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ 45 ನೇ ವಾರ್ಷಿಕ ಮಹಾಸಭೆ..!!

Next Post

ಬೆಂಗಳೂರು :ನವ ವಿವಾಹಿತೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು :ನವ ವಿವಾಹಿತೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved