Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ..!!

Dhrishya News by Dhrishya News
25/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ..!!
0
SHARES
28
VIEWS
Share on FacebookShare on Twitter

ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ಸೋಮವಾರ ಸಾಕ್ಷಿಯಾಗಲಿದೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.

*ಮುಖ್ಯಮಂತ್ರಿಗಳ ಸೂಚನೆ ಏನು?*

ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು.

“ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು.

 

ಈ ಸೂಚನೆಯ ಫಲವೇ ಸೆ.25ರ ಸೋಮವಾರ ರಾಜ್ಯದಾದ್ಯಂತ ಏಕ ಕಾಲಕ್ಕೆ ನಡೆಯಲಿರುವ “ಜನತಾ ದರ್ಶನ” ಕಾರ್ಯಕ್ರಮ. ಇದು ನಿಗದಿತವಾಗಿ ನಡೆಯಲಿದೆ.

*ಸ್ವರೂಪ ಏನು?*

 

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳ ಮೇಲೆ ಇರುತ್ತದೆ.

 

ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆಧ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲೆ ಇರುತ್ತದೆ.

 

*ಸಾರ್ವಜನಿಕರ ಅಹವಾಲು ಎಲ್ಲಿ ದಾಖಲಾಗುತ್ತವೆ?*

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

 

*ತಾಲ್ಲೂಕು ಮಟ್ಟದ ಜನತಾ ದರ್ಶನ*

ಇಡಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.

 

*ಪರಿಣಾಮ*

 

ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ.

 

ಹೀಗೆ…ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.

Previous Post

ಮಲ್ಪೆ : ಗೆಸ್ಟ್ ಹೌಸ್ ಗೆ ಪೊಲೀಸರ ದಾಳಿ: 14 ಮಂದಿ ವಶಕ್ಕೆ..!!

Next Post

ಮಲ್ಪೆ ಬೀಚ್‌ : ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26 ನಾಳೆಯಿಂದ ಬಲೆ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬೀಚ್‌ : ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26 ನಾಳೆಯಿಂದ  ಬಲೆ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ..!!

ಮಲ್ಪೆ ಬೀಚ್‌ : ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26 ನಾಳೆಯಿಂದ ಬಲೆ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved