Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೈಸೂರಿನ ದಲಿತರ ಕೇರಿಯಲ್ಲಿ ಪೇಜಾವರ ಶ್ರೀಗಳ ಮಿಂಚಿನ ಸಂಚಾರ..!!

Dhrishya News by Dhrishya News
26/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಮೈಸೂರು :ಮೈಸೂರಿನ ಬಿ ಬಿ ಕೇರಿಯಲ್ಲಿ ಸೋಮವಾರ ಸಂಜೆ ಮಿಂಚಿನ ಸಂಚಾರ ಕೈಗೊಂಡು ನಿವಾಸಿಗಳಲ್ಲಿ ಪುಳಕ ಉಂಟು ಮಾಡಿದರು ‌.

ಹಿಂದು ಸಮಾಜದಲ್ಲಿ ಆಂತರಿಕವಾಗಿ ಬಾಂಧವ್ಯ ಮತ್ತು ಸಾಮರಸ್ಯವನ್ನು ಸುದೃಡಗೊಳಿಸುವ ಧರ್ಮ ಜಾಗೃತಿಯನ್ನು ಮೂಡಿಸುವ ಸಲುವಾಗಿ ತಮ್ಮ 36 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಹಮ್ಮಿಕೊಂಡ ಹತ್ತಾರು ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳ ಬಡಾವಣೆಗಳಿಗೆ ಸಾಮರಸ್ಯದ ನಡಿಗೆಯನ್ನು ಆದ್ಯತೆಯಲ್ಲಿ ಹಮ್ಮಿಕೊಳ್ಳುವಂತೆ ಚಾತುರ್ಮಾಸ್ಯ ಸಮಿತಿಗೆ ಸೂಚಿಸಿದ್ದರು.

ಅದರಂತೆ ಮೈಸೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧರ್ಮಜಾಗರಣ ವಿಭಾಗ ಮತ್ತು ಸಾಮರಸ್ಯ ವೇದಿಕೆಗಳ ಜಂಟಿ ಸಂಯೋಜನೆಯಲ್ಲಿ ಬಿ ಬಿ ಕೇರಿ ಬಡಾವಣೆಗೆ ತೆರಳಿದರು.

ಸುಮಾರು ಇನ್ನೂರಕ್ಕೂ ಅಧಿಕ ಮನೆಗಳನ್ನು ಹೊಂದಿರುವ ಬಡಾವಣೆಗೆ ಶ್ರೀಗಳ ಭೇಟಿಯ ಹಿನ್ನೆಲೆಯಲ್ಲಿ ಪ್ರತೀ ಮನೆಗಳ ಮುಂಭಾಗ ಓಣಿ ರಸ್ತೆಗಳುದ್ದಕ್ಕೂ ಸಾಲು ಸಾಲು ರಂಗೋಲಿ , ಕೇಸರಿ ಪತಾಕೆ , ಭಗವಾಧ್ವಜ , ತಳಿರು ತೋರಣ ಹೂವಿನ ಮಾಲೆಗಳ ಮೂಲಕ ಅಲಂಕರಿಸಲಾಗಿತ್ತು.

ಶ್ರೀಗಳು ಆಗಮಿಸುತ್ತಿದ್ದಂತೆ ಜೈಶ್ರೀರಾಮ್ ಅಯೋಧ್ಯಾಪತಿ ಶ್ರೀ ರಾಮಚಂದ್ರ ಭಗವಾನ್ ಕೀ ಜೈ , ಭಾರತ್ ಮಾತೆ , ಸನಾತನ ಧರ್ಮಗಳಿಗೆ ಜೈಕಾರಗಳು , ವಂದೇ ಮಾತರಮ್ , ನಾವೆಲ್ಲ ಹಿಂದು ನಾವೆಲ್ಲ ಒಂದು ಮೊದಲಾದ ಘೋಷಣೆಗಳು ಮೊಳಗಿದವು . ಬಾಲಕರಿಂದ ನಾಸಿಕ್ ಬ್ಯಾಂಡ್ ವಾದನ ಮಹಿಳೆಯರು ಯುವತಿಯರು ಪೂರ್ಣಕುಂಭ ಕಲಶಗಳನ್ನು ಹೊತ್ತು ಶ್ರೀಗಳನ್ನು ಸಂಭ್ರಮದಿಂದ ಸ್ವಾಗತಿಸಿದರು.

ಇಡೀ ಬಡಾವಣೆಯಲ್ಲಿ ಉತ್ಸಾಹ ಸಡಗರಗಳು ಕಂಡುಬಂದವು . ಆರಂಭದಲ್ಲಿ ಐದು ಮನೆಗಳಿಗೆ ತೆರಳಿ ಶ್ರೀ ಮಠದಿಂದಲೇ ಎಲ್ಲ ಮನೆಗಳಿಗೂ ಕೊಡಮಾಡಿದ ಹಿತ್ತಾಳೆಯ ಶ್ರೀ ರಾಮ ದೀಪ ಗಳನ್ನು ಬೆಳಗಿ ಮನೆಯ ದೇವರ ಭಾವಚಿತ್ರಗಳಿಗೆ ಹೂವನ್ನು ಏರಿಸಿ ಮಂಗಳಾರತಿ ಬೆಳಗಿದರು . ಮನೆ ಮಂದಿ ಶ್ರೀಗಳ ಕಾಲಿಗೆ ನೀರೆರೆದು , ಅರಶಿನ ಕುಂಕುಮ , ಓಕುಳಿಯ ಆರತಿಗಳನ್ನು ಬೆಳಗಿ ಭಕ್ತಿಯಿಂದ ಬರಮಾಡಿಕೊಂಡರು . ಮನೆಗೆ ಬಂದ ಗುರುಗಳಿಗೆ ಫಲವಸ್ತುಗಳನ್ಬು ಅರ್ಪಿಸಿದರು. ‌. ಪ್ರತೀ ಮನೆಗಳ ಸದಸ್ಯರನ್ನು ಆತ್ಮೀಯವಾಗಿ ಪರಿಚಯ ಮಾಡಿಕೊಂಡು ಯೋಗಕ್ಷೇಮ ವಿಚಾರಿಸಿದರು .

 

ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ತನಕ ಪ್ರತೀ ದಿನ ಸಂಜೆ ರಾಮದೀಪ ಬೆಳಗಿ ರಾಮಮಂತ್ರ ಜಪ ಮಾಡಿ ಪ್ರಾರ್ಥಿಸುವಂತೆ ಸೂಚಿಸಿದರು . ಮಕ್ಕಳಿಗೆ ಉತ್ತಮ ಶಿಕ್ಷಣ , ಸಂಸ್ಕಾರಗಳನ್ನು ನೀಡಬೇಕು .ಹಿಂದು ಸಮಾಜದ ಅವಿಭಾಜ್ಯ ಅಂಗವಾಗಿರುವ ನಾವೆಲ್ಲ ನಮ್ಮ ನಮ್ಮ‌ಕೇರಿ ಬಡಾವಣೆಗಳಲ್ಲೂ ಸಾಮರಸ್ಯ ಐಕಮತ್ಯ ಮತ್ತು ಧರ್ಮ ಪ್ರಜ್ಞೆಯನ್ನು ಉಳಿಸಿ ಒಗ್ಗಟ್ಟಿನಿಂದ ಶಾಂತಿ ನೆಮ್ಮದಿಯಿಂದ ಜೀವಿಸಬೇಕಾಗಿದೆ .ಇದೇ ಹಿಂದು ಸಮಾಜದ ಶಕ್ತಿಯಾಗಿದೆ ‌. ಅದನ್ನುಳಿಸುವುದು ನಮ್ಮ ಕರ್ತವ್ಯವೂ ಆಗಿದೆ ಎಂದರು . ಎಲ್ಲ ಮನೆಗಳಲ್ಲಿ ದೇವರ ಅತ್ಯಂತ ಸ್ವಚ್ಛ ಮತ್ತು ಸುಂದರವಾಗಿ ದೇವರಿಗಾಗಿ ಪ್ರತ್ಯೇಕ ಜಾಗವನ್ನು ಮೀಸಲಿಟ್ಟು ದೇವ ದೇವತೆಯರ ಚಿತ್ರ ಮೂರ್ತಿ ಕಲಶ ಗಳನ್ನಿಟ್ಟು ಅತ್ಯಂತ ಶ್ರದ್ಧೆಯಿಂದ ಪೂಜಿಸಿಕೊಂಡು ಬರುತ್ತಿರುವುದನ್ನು ಕಂಡು ಅತ್ಯಂತ ಸಂತಸಪಟ್ಟರು.

ಬಳಿಕ ಕೇರಿಯ ಪಟ್ಟಾಲದಮ್ಮ ದೇವಿ ಮಂದಿರಕ್ಕೆ ಭೇಟಿ ನೀಡಿ ಆರತಿ ಬೆಳಗಿದರು .ಎಲ್ಲ ಮನೆಗಳಿಗೂ ಶ್ರೀ ಕೃಷ್ಣನ ಸಿಹಿತಿಂಡಿ ಪ್ರಸಾದಗಳನ್ನು ವಿತರಿಸಿದರು . ಸಾಮಾಜಿಕ ನ್ಯಾಯ ವೇದಿಕೆಯ ಡಾ ಆನಂದ್ ಕುಮಾರ್ , ಸ್ಥಳೀಯರಾದ ನಾಗೇಂದ್ರ , ಧರ್ಮ ಜಾಗರಣದ ವಾಮನ್ ರಾವ್ , ನಿತ್ಯಾನಂದ ಗಿರೀಶ , ಮೊದಲಾದವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದ್ದರು .

ಪುತ್ತೂರಿನ ಹಿಂದು ನೇತಾರ ಅರುಣ ಕುಮಾರ ಪುತ್ತಿಲ , ಚಾತುರ್ಮಾಸ್ಯ ಸಮಿತಿಯ ಪ್ರಮುಖರಾದ ಎಂ‌ ಕೃಷ್ಣರಾಜ ಪುರಾಣಿಕ , ರವಿ ಶಾಸ್ತ್ರಿ , ಶ್ರೀಗಳ ಆಪ್ತರಾದ ವಿಷ್ಣು ಆಚಾರ್ಯ , ಕೃಷ್ಣ ಭಟ್ , ವಾಸುದೇವ ಭಟ್ , ಶ್ರೀನಿವಾಸ ಪ್ರಸಾದ್ , ಮೊದಲಾದವರಿದ್ದರು .ಶ್ರೀಗಳವರ ಶಾಸ್ತ್ರ ವಿದ್ಯಾರ್ಥಿಗಳೂ ಆಗಮಿಸಿ ಸಹಕರಿಸಿದರು .

Previous Post

ಪೆರಂಪಳ್ಳಿಯ ಶರೀನಾ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ..!!

Next Post

ಬೆಂಗಳೂರು : ಸ್ಮಾರಕಗಳ ದತ್ತು ಯೋಜನೆಗೆ ಉದ್ಯಮಿಗಳ ಸ್ಪಂದನೆ…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು : ಸ್ಮಾರಕಗಳ ದತ್ತು ಯೋಜನೆಗೆ ಉದ್ಯಮಿಗಳ ಸ್ಪಂದನೆ…!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved