Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯಾದ್ಯಂತ ಏಕಕಾಲಕ್ಕೆ ನಡೆದ “ಜನತಾ ದರ್ಶನಕ್ಕೆ” ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ..!!

Dhrishya News by Dhrishya News
26/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಂಗಳೂರು ಸೆ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

 

ಸಂಜೆ 6:30 ರ ವೇಳೆಗೆ ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ. (ಇದರಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ).

 

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6:30 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ.

 

ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

 

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

 

ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

 

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

 

ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

Previous Post

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡಕ್ಕೆ ಉಡುಪಿಯ ನಿಶ್ಚಿತ್ ನಾಗರಾಜ್ ಪೈ ಆಯ್ಕೆ..!!

Next Post

ಏಷ್ಯನ್ ಗೇಮ್ಸ್​ 2023 : ಬೆಳ್ಳಿ ಗೆದ್ದ ಭಾರತದ ಬಾಲಕಿ ನೇಹಾ ಠಾಕೂರ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಷ್ಯನ್ ಗೇಮ್ಸ್​ 2023 : ಬೆಳ್ಳಿ ಗೆದ್ದ ಭಾರತದ ಬಾಲಕಿ ನೇಹಾ ಠಾಕೂರ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved