Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾಜಾಂಗಣದಲ್ಲಿ 4ನೇ ವರ್ಷದ ಯಕ್ಷ ಪಂಚಮಿ ಉದ್ಘಾಟನೆ..!!

Dhrishya News by Dhrishya News
26/09/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

⭕️ಯಕ್ಷಗಾನ ಕಲೆ ಉಳಿವು ಬೆಳವಣಿಗೆಗೆ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸದಾ ಪ್ರೋತ್ಸಾಹ : ಡಾ. ತಲ್ಲೂರು

ಉಡುಪಿ : ಸೆಪ್ಟೆಂಬರ್ 26: ದೃಶ್ಯ ನ್ಯೂಸ್ : ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪವ ಪರಿಷದ್ ಬೆಂಗಳೂರು ಉಡುಪಿ ಜಿಲ್ಲೆ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ ಸಹಕಾರದಲ್ಲಿ 4ನೇ ವರ್ಷದ `ಯಕ್ಷ ಪಂಚಮಿ ‘ ಕಾರ್ಯಕ್ರಮದ ಉದ್ಘಾಟನೆ ಸೋಮವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯಕ್ರಮದ ರೂವಾರಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಉಡುಪಿ ಶ್ರೀಕೃಷ್ಣನ ಸಾನಿಧ್ಯದಲ್ಲಿ ನಡೆಸುವ ಯಕ್ಷಗಾನ, ನರ್ತನ ಮೊದಲಾದ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರೆ ಕಲೆ ಅಕ್ಷಯವಾಗುತ್ತದೆ. ಯಕ್ಷಗಾನದಂತಹ ಭಗವತ್ ಕಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಏಕೈಕ ಉದ್ದೇಶದಿಂದ ಯಕ್ಷ ಪಂಚಮಿ, ಶ್ರೀಧಾರೇಶ್ವರ ಅಷ್ಟಾಹ ಮೊದಲಾದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇಲ್ಲಿ ಯಕ್ಷಗಾನ ಕಲೆಯ ಪ್ರದರ್ಶನ ಮಾತ್ರವಲ್ಲದೆ ಸಾಧಕ ಯಕ್ಷ ಕಲಾವಿದರನ್ನು ಕೂಡಾ ಗುರುತಿಸಿ ಅವರಿಗೆ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ವತಿಯಿಂದ `ಯಕ್ಷ ಪ್ರಶಸ್ತಿ ‘ಯನ್ನು ನೀಡಿ ಗೌರವಿಸಲಾಗುತ್ತಿರುವುದು ಅತೀವ ಸಂತೋಷ ತಂದಿದೆ ಎಂದರು.

ಯಕ್ಷಗಾನ ಕಲೆಯ ಬೆಳವಣಿಗೆಗೆ ಅವಿರತ ಶ್ರಮಿಸುತ್ತಿರುವ ವಕ್ವಾಡಿ ರಂಜಿತ್ ಶೆಟ್ಟಿ ಯವರಂತಹ ಕಲಾರಾಧಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರಂಗಕ್ಕೆ ಬರಬೇಕು. ಕಲೆಯ ಉಳಿವಿಗೆ ಹೇಗೆ ಕಲಾವಿದ, ಪ್ರೇಕ್ಷಕನೂ ಕಾರಣನಾಗುತ್ತಾನೋ ಹಾಗೆಯೇ ಕಲಾರಾಧಕರ ಕೊಡುಗೆ ಕೂಡಾ ಅಷ್ಟೇ ಅಗತ್ಯವಿದೆ. ಯಾವುದೇ ಸ್ವಾರ್ಥವಿಲ್ಲದೆ, ಕೇವಲ ಕಲೆಯ ಉಳಿವಿಗೆ ಚಿಂತನೆ ನಡೆಸುವ ಇಂತಹ ಕಲಾಪ್ರೇಮಿಗಳನ್ನು ಟ್ರಸ್ಟ್, ಜಾನಪದ ಪರಿಷತ್ತು ತುಂಬು ಹೃದಯದ ಪ್ರೋತ್ಸಾಹ ನೀಡಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್ ಉದ್ಘಾಟಿಸಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಮೆಕ್ಕೆಕಟ್ಟು ಇಲ್ಲಿನ ಆಡಳಿತ ಮೊಕ್ತೇಸರ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಂಗಸ್ಥಳ ಮಂಗಳೂರು ಅಧ್ಯಕ್ಷ ದಿನೇಶ್ ವಿ.ಪೈ, ಶ್ರೀ ಹಟ್ಟಿಯಂಗಡಿ ಮೇಳದ ಸಂಚಾಲಕ ವಕ್ವಾಡಿ ರಂಜಿತ್ ಶೆಟ್ಟಿ, ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

*ಐದು ದಿನ ಯಕ್ಷ ಪಂಚಮಿ* ಪ್ರಸ್ತುತ ಈ ಯಕ್ಷ ಪಂಚಮಿ ಕಾರ್ಯಕ್ರಮ ಸೆ.25ರಿಂದ ಸೆ.29ರ ವರೆಗೆ ನಡೆಯಲಿದ್ದು, ಸೆ.26ರಂದು ಹರಿದರ್ಶನ, ಸೆ.27ರಂದು ವಾಲಿಮೋಕ್ಷ, ಸೆ.28ರಂದು ಶ್ರೀಕೃಷ್ಣ ಪಾರಿಜಾತ ಹಾಗೂ ಸೆ.29ರಂದು ಶ್ರೀನಿವಾಸ ಕಲ್ಯಾಣ ಪ್ರಸಂಗ ಪ್ರಸ್ತುತಗೊಳ್ಳಲಿದೆ. ಸೆ.29ರಂದು ನಡೆಯುವ ಸಮಾರೋಪದಲ್ಲಿ ಸಂಜೆ 7 ಗಂಟೆಗೆ ನಡೆಯುವ ಸಮಾರೋಪದಲ್ಲಿ ಬಣ್ಣದ ವೇಷಧಾರಿ ಶಂಕರ ಮರಕಲ ಅವರಿಗೆ ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ‘ಯಕ್ಷ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

Tags: #ಉಡುಪಿ#ಯಕ್ಷ ಪಂಚಮಿ#ಉದ್ಘಾಟನೆ#ನ್ಯೂಸ್
Previous Post

ಕಾಪು : ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ..!!

Next Post

ಮಣಿಪಾಲ : ವಿಶ್ವ ಶ್ವಾಸಕೋಶ ದಿನದ ಆಚರಣೆ – 2023..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ವಿಶ್ವ ಶ್ವಾಸಕೋಶ ದಿನದ ಆಚರಣೆ – 2023..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved