Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ:ವಿಶ್ವ ಹೃದಯ ದಿನ ಪ್ರಯುಕ್ತ ರಜತಾದ್ರಿಯ ಡಿ ಸಿ ಕಛೇರಿ ಮತ್ತು ಇತರ ಕಛೇರಿಗಳ ಸರಕಾರಿ ನೌಕರರಿಗೆ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ..!!

Dhrishya News by Dhrishya News
29/09/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಮಣಿಪಾಲ, 29, ಸೆಪ್ಟೆಂಬರ್ 2023 ದ್ರಶ್ಯ ನ್ಯೂಸ್ :ಸೆಪ್ಟೆಂಬರ್ 29 ಅನ್ನು ಪ್ರತಿ ವರ್ಷ ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ. ಹೃದಯ ರಕ್ತನಾಳದ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ, ಇದು ಪ್ರಪಂಚದ ಎಲ್ಲಾ ಸಾಂಕ್ರಾಮಿಕವಲ್ಲದ ರೋಗಗಳ ಪಾಲಿನ ಅರ್ಧದಷ್ಟಿದೆ. ವಿಶ್ವ ಹೃದಯ ದಿನದ 2023 ರ ಘೋಷ ವಾಕ್ಯ “ಹೃದಯವಂತಿಕೆ ಬಳಸಿರಿ : ಹೃದಯವನ್ನು ಅರಿಯಿರಿ.

ವಿಶ್ವ ಹೃದಯ ದಿನದ ಅಂಗವಾಗಿ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ ಮಣಿಪಾಲವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ ಇವರ ಸಹಯೋಗದಲ್ಲಿ ಮಣಿಪಾಲದ ರಜತಾದ್ರಿಯ ಡಿ ಸಿ ಕಛೇರಿ ಮತ್ತು ಇತರ ಕಛೇರಿಗಳ ಸರಕಾರಿ ನೌಕರರಿಗೆ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ , ಆರೋಗ್ಯದ ಕುರಿತು ಯಾರೂ ಕೂಡ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರಬಾರದು. ನಿತ್ಯವೂ ಕನಿಷ್ಠ ವ್ಯಾಯಾಮ ಮಾಡಬೇಕು . ಸಮತೋಲಿತ ಆಹಾರ ಸೇವಿಸಬೇಕು, ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಅರಿವು ಜಾಗೃತಿ ಅಗತ್ಯ. ಬದಲಾದ ಜೀವನ ಶೈಲಿಯಿಂದ ಹಲವಾರು ಆರೋಗ್ಯ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ಮಣಿಪಾಲ ಸಂಸ್ಥೆಯವರು ಆಯೋಜಿಸಿರುವ ಈ ಉಚಿತ ಹೃದಯ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್ ಅವರು, ವರ್ಷಕೊಮ್ಮೆ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ತಾವು ಆರೋಗ್ಯವಂತರಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದರು . ಉಡುಪಿ ಜಿಲ್ಲಾ ಆರೋಗ್ಯ, ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಾ.ನಾಗಭೂಷಣ ಉಡುಪ, ಜಿಲ್ಲಾ ಪಂಚಾಯತ್ ಸಿ ಪಿ ಓ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಸ್ವಾಗತಿಸಿ, ಇಂದಿನ ಈ ಹೃದಯ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ , ಇಸಿಜಿ, ಟೋಟಲ್ ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್ಗಳು ಮತ್ತು ಹೃದ್ರೋಗ ತಜ್ಞರ ಸಮಾಲೋಚನೆಯನ್ನು ಉಚಿತವಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ವಂದಿಸಿದರು. ವಿಭಾಗದ ಡಾ ಆಫ್ರೋಜ್ ಕಾರ್ಯಕ್ರಮ ನಿರೂಪಿಸಿದರು.

Tags: #ಮಣಿಪಾಲ#ವಿಶ್ವ ಹೃದಯದಿನ#ದೃಶ್ಯ ನ್ಯೂಸ್
Previous Post

ಜೀವನ್ಮರಣ ಸ್ಥಿತಿಯಲ್ಲಿರುವ ರೋಗಿಗಳ ಪ್ರಶಾಮಕ ಆರೈಕೆ ಕೇಂದ್ರದ ಉದ್ದೇಶಿತ ಉದಾತ್ತ ಆಶಯದೊಂದಿಗೆ ಫೆಬ್ರವರಿ 11 2024 ರಂದು ನಡೆಯಲಿದೆ 6ನೆಯ “ಮಣಿಪಾಲ್‌ ಮ್ಯಾರಥಾನ್‌”..!!

Next Post

ವಿಶ್ವ ಕ್ರಿಕೆಟ್ ಪಂದ್ಯಾವಳಿ: ಚಿನ್ನದ ಪದಕ ಗೆದ್ದ ಅಂಧ ಮಹಿಳಾ,ರಜತ ಪದಕ ಗೆದ್ದ ಅಂಧ ಪುರುಷ ತಂಡದ ಆಟಗಾರರಿಗೆ ಸಿ.ಎಂ. ಸಿದ್ದರಾಮಯ್ಯ ಅಭಿನಂದನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಕ್ರಿಕೆಟ್ ಪಂದ್ಯಾವಳಿ: ಚಿನ್ನದ ಪದಕ ಗೆದ್ದ ಅಂಧ ಮಹಿಳಾ,ರಜತ ಪದಕ ಗೆದ್ದ ಅಂಧ ಪುರುಷ ತಂಡದ ಆಟಗಾರರಿಗೆ ಸಿ.ಎಂ. ಸಿದ್ದರಾಮಯ್ಯ ಅಭಿನಂದನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved