Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಾಂಧೀಜಿ ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಮುಖ್ಯ ಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
02/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಗಾಂಧೀಜಿ ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಮುಖ್ಯ ಮಂತ್ರಿ ಸಿದ್ದರಾಮಯ್ಯ..!!
0
SHARES
7
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್ 02: ದ್ರಶ್ಯ ನ್ಯೂಸ್ ಗಾಂಧೀಜಿ ಹಾಗೂ ಶಾಸ್ತ್ರಿಯವರ ಬದುಕು ಹಾಗೂ ಮೌಲ್ಯಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವ154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 119 ನೇ ಜನ್ಮದಿನದ ಅಂಗವಾಗಿ ಅವರ ವಿಧಾನಸೌದಾದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ದೇಶಾದ್ಯಂತ ಗಾಂಧೀಜಿ ಹಾಗೂ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹಾತ್ಮಾ ಗಾಂಧೀಜಿಯವರಿಗೆ ನಾವು ನಮನ ಸಲ್ಲಿಸಿ, ಅವರ ಹೋರಾಟದ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿ ಯಾಗಲಿ ಎಂದು ಹೇಳಿದರು.

ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ. ಜೀವನದ್ದುದ್ದಕ್ಕೂ ಪ್ರಾಮಾಣಿಕವಾಗಿ ಬದುಕಿದವರು. ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಮೌಲ್ಯ ನಮ್ಮೆಲ್ಲರಿಗೂ ದಾರಿದೀಪ. ಗಾಂಧೀಜಿಯವರು ಸರಳ ಜೀವನ ನಡೆಸಿದವರು. ಅಹಿಂಸಾ ಮಾರ್ಗ ಅನುಸರಿಸಿ, ಅಹಿಂಸಾತ್ಮಕ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿ ಬದುಕಿದಂತೆ ಬದುಕಲು ಪ್ರಯತ್ನಿಸಿದರು. ಮೂರನೇ ದರ್ಜೆ ಬೋಗಿಯಲ್ಲಿ ಯಾವಾಗಲೂ ಪ್ರಯಾಣಿಸುತ್ತಿದ್ದರು. ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ 3 ನೇ ದರ್ಜೆಗಿಂತಲೂ ಕೆಳ ದರ್ಜೆಯದ್ದು ಇಲ್ಲವಾದ್ದರಿಂದ 3 ನೇ ದರ್ಜೆಯಲ್ಲಿ ಪ್ರಯಾಣಿಸುವುದಾಗಿ ಉತ್ತರಿಸಿದರು. ಅಷ್ಟರ ಮಟ್ಟಿಗೆ ಸತ್ಯ, ಅಹಿಂಸೆಯನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡವರು. ದಕ್ಷಿಣ ಆಫ್ರಿಕಾ ದಲ್ಲಿದ್ದಾಗಲೂ ಸೆರೆಮನೆ ವಾಸ ಅನುಭವಿಸಿದ್ದರು. ಭಾರತದಲ್ಲಿಯೂ ಸೆರೆಮನೆಯ ವಾಸ ಅನುಭವಿಸಿ ದೇಶಕ್ಕೆ ಅವರ ನೇತೃತ್ವದಲ್ಲಿ ಅನೇಕ ಜನರು ತ್ಯಾಗ, ಬಲಿದಾನಗಳನ್ನು ಅರ್ಪಿಸಿದರು. ಮತಾಂಧ ನಾಥೂರಾಮ್ ಗೋಡ್ಸೆ ಗುಂಡಿಗೆ ಬಲಿಯಾದರು ಎಂದು ಸ್ಮರಿಸಿದರು.

*ವಿಶ್ವನಾಯಕ ಗಾಂಧಿ*
ಸಮಾಜದಲ್ಲಿ ಎಲ್ಲ ಜನರೂ ಶಾಂತಿ, ನೆಮ್ಮದಿಯಿಂದ ಇರಬೇಕು. ಜಾತಿ, ಧರ್ಮ ಎಂದು ಹೊಡೆದಾಡಬಾರದು. ದೇಶ ಇಬ್ಭಾಗವಾಗಬಾರದು ಎಂದು ಹೋರಾಡಿದರು. ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ನಂತರ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಕಲ್ಕತ್ತಾದಲ್ಲಿ ಸತ್ಯಾಗ್ರಹ ಮಾಡುತ್ತಿದ್ದರು. ಅಷ್ಟು ಹೊತ್ತಿಗೆ ದೇಶ ವಿಭಜನೆಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಬಗೆಹರಿಸಲು ಸತ್ಯಾಗ್ರಹ ಮಾಡಿದರು. ಜಗತ್ತಿನ 148 ದೇಶಗಳಲ್ಲಿ ಅವರ ಪ್ರತಿಮೆಗಳಿವೆ
ಅವರು ಕೇವಲ ಭಾರತದ ನಾಯಕರಾಗಿರಲಿಲ್ಲ. ಜಗತ್ತಿನಲ್ಲಿಯೇ ಗೌರವಕ್ಕೆ ಪ್ರಾತ್ರರಾದ ವಿಶ್ವನಾಯಕರು. ಅಂಥವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಹೋರಾಟ, ಸತ್ಯ, ಧರ್ಮನಿಷ್ಠೆ ಎಲ್ಲವೂ ನಮಗೆ ದಾರಿದೀಪವಾಗಲಿ ಹಾಗೂ ಸ್ಪೂರ್ತಿ ನೀಡಲಿ ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

Tags: #ಬೆಂಗಳೂರು#ಸಿದ್ದರಾಮಯ್ಯ#ಗಾಂಧೀಜಿ ಜಯಂತಿ#ನ್ಯೂಸ್
Previous Post

ಕುಂದಾಪುರ : ಕಾರು ಸೈಡ್ ಕೊಡುವ ವಿಚಾರದಲ್ಲಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು..!!

Next Post

ಮಹಾತ್ಮ ಗಾಂಧಿ ಅಹಿಂಸೆ ಮೂಲಕವೇ ಜಗತ್ತಿನ ಮೂಲೆ ಮೂಲೆ ತಲುಪಿ ಪೂಜ್ಯರಾದರು:ಸಿ ಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹಾತ್ಮ ಗಾಂಧಿ ಅಹಿಂಸೆ ಮೂಲಕವೇ ಜಗತ್ತಿನ ಮೂಲೆ ಮೂಲೆ ತಲುಪಿ ಪೂಜ್ಯರಾದರು:ಸಿ ಎಂ ಸಿದ್ದರಾಮಯ್ಯ..!!

ಮಹಾತ್ಮ ಗಾಂಧಿ ಅಹಿಂಸೆ ಮೂಲಕವೇ ಜಗತ್ತಿನ ಮೂಲೆ ಮೂಲೆ ತಲುಪಿ ಪೂಜ್ಯರಾದರು:ಸಿ ಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved