Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸಮಾಲೋಚನ ಸಭೆ ..!!

Dhrishya News by Dhrishya News
04/10/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾಪು :ಉಡುಪಿ ಜಿಲ್ಲೆಯ ಶಾಸಕರು, ಉದ್ಯಮಿಗಳು, ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರು ಹಾಗೂ ಭಕ್ತರನ್ನೊಳಗೊಂಡ ಸಮಾಲೋಚನ ಸಭೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಅಕ್ಟೋಬರ್ 03 ಮಂಗಳವಾರ ನಡೆಯಿತು.

ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ವೇ| ಮೂ| ಶ್ರೀಶ ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಗಣ್ಯರಿಂದ ಮಾರಿಗುಡಿ ಜೀರ್ಣೋದ್ಧಾರಕ್ಕೆ ಪೂರಕವಾಗಿ ಜಿಲ್ಲೆಯಾದ್ಯಂತ ಗ್ರಾಮ ಸಮಿತಿ ರಚನೆ, ಶಿಲಾ ಸೇವೆ ಕೊಡುಗೆ, ಅಮ್ಮನ ಮಕ್ಕಳು ತಂಡಕ್ಕೆ ಭಕ್ತರ ಸೇರ್ಪಡೆ ವಾಗ್ಧಾನ ಸ್ವೀಕಾರ ಸಹಿತ ದರ್ಶನ ಸೇವೆಯಲ್ಲಿ ಅಭಯ ಪ್ರಸಾದ ನೀಡಲಾಯಿತು

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಗಣ್ಯರನ್ನೊಳಗೊಂಡ ತಂಡವು ಸಂಪೂರ್ಣ ಇಳಕಲ್‌ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಹೊಸ ಮಾರಿಗುಡಿ, ಉಚ್ಚಂಗಿ ಗುಡಿ ಸಹಿತವಾಗಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಗಣ್ಯ ಮಹಿಳೆಯರಾದ ನಿರುಪಮಾ ಪ್ರಸಾದ್‌, ಸ್ವಪ್ನ ಸುರೇಶ್‌, ವಿಜಯ ಗೋಪಾಲ ಬಂಗೇರ, ಕವಿತಾ ಸುರೇಶ್‌, ಬೇಬಿ ಕುಂದರ್‌, ಅಮೃತಾ ಕೃಷ್ಣಮೂರ್ತಿ, ಸ್ವರೂಪ ಶೆಟ್ಟಿ, ಮೀನಾ ಅಡ್ಯಂತಾಯ, ರೂಪಾ ಶೋಧನ್‌ ಶೆಟ್ಟಿ ಸಭೆಯನ್ನು ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಮುಂದಿನ 1,200 ವರ್ಷಗಳವರೆಗೆ ಬಾಳಿಕೆ ಬರುವಂತಹ ಇಳಕಲ್‌ ಶಿಲೆಯನ್ನು ಬಳಸಿಕೊಂಡು ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದೆ. 18 ದೇಶಗಳಲ್ಲಿ ಸಮಿತಿ ರಚಿಸಲಾಗಿದ್ದು ಕರಾವಳಿ ಜಿಲ್ಲೆಗಳಲ್ಲೂ ಸಮಿತಿ ರಚಿಸಲು ಒತ್ತು ನೀಡಲಾಗುತ್ತಿದೆ ಎಂದರು.

ಶಾಸಕರಾದ ಗುರುರಾಜ್‌ ಗಂಟಿಹೊಳೆ, ಕಿರಣ್‌ ಕುಮಾರ್‌ ಕೊಡ್ಗಿ, ಯಶ್‌ಪಾಲ್‌ ಸುವರ್ಣ, ಕೆಎಂಎಫ್‌ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಗಣ್ಯರಾದ ಜೆರ್ರಿ ವಿನ್ಸೆಂಟ್‌ ಡಯಾಸ್‌, ಬಿ.ಎನ್‌. ಶಂಕರ ಪೂಜಾರಿ, ಜಯ ಸಿ. ಕೋಟ್ಯಾನ್‌, ಗೋಪಾಲ ಬಂಗೇರ, ರಮೇಶ ಕಾಂಚನ್‌, ಜನಾರ್ದನ ತೋನ್ಸೆ, ಅಶೋಕ್‌ ಶೆಟ್ಟಿ, ಪಿ. ಕಿಶನ್‌ ಹೆಗ್ಡೆ, ಅಜಯ್‌ ಪಿ. ಶೆಟ್ಟಿ, ವಿ.ಜಿ. ಶೆಟ್ಟಿ, ಮೋಹನಚಂದ್ರ ನಂಬಿಯಾರ್‌, ನವೀನ್‌ ಅಡ್ಯಂತಾಯ, ದಿವಾಕರ್‌ ಸನಿಲ್‌, ಶೋಧನ್‌ ಕುಮಾರ್‌ ಶೆಟ್ಟಿ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿ ಸಿಕೊಳ್ಳುವ ವಾಗ್ಧಾನ ನೀಡಿದರು.
ಪ್ರಮುಖರಾದ ಕೆ. ಉದಯ ಕುಮಾರ್‌ ಶೆಟ್ಟಿ, ನಾಗೇಶ್‌ ಹೆಗ್ಡೆ, ಸಾಧು ಸಾಲ್ಯಾನ್‌, ಆನಂದ್‌ ಕುಂದರ್‌, ಮಟ್ಟಾರು ರತ್ನಾಕರ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ಕುಯಿಲಾಡಿ ಸುರೇಶ್‌ ನಾಯಕ್‌, ಕಿರಣ್‌ ಕುಮಾರ್‌, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸುಪ್ರಸಾದ್‌ ಶೆಟ್ಟಿ, ದಿನಕರ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ಉದಯ ಶೆಟ್ಟಿ ಇನ್ನ, ಶ್ರೀಪತಿ ಭಟ್‌, ಸುಧೀರ್‌ ಶೆಟ್ಟಿ, ಸುರೇಂದ್ರ ಪಣಿಯೂರು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ರೇಷ್ಮಾ ಯು. ಶೆಟ್ಟಿ, ವಿವಿಧ ಸಮುದಾಯ ಮತ್ತು ರಾಜಕೀಯ ಪಕ್ಷಗಳ ಮುಖಂಡರು, ಹೊಸ ಮಾರಿಗುಡಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮೇಶ್‌ ಹೆಗ್ಡೆ ಕಲ್ಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ದೇವಿಪ್ರಸಾದ್‌ ಶೆಟ್ಟಿ, ಗಂಗಾಧರ ಸುವರ್ಣ, ಮನೋಹರ ಶೆಟ್ಟಿ, ಮಾಧವ ಆರ್‌. ಪಾಲನ್‌, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು. ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್‌ ಶೆಟ್ಟಿ ಬಾಲಾಜಿ ವಂದಿಸಿದರು. ನಿರ್ಮಲ್‌ ಕುಮಾರ್‌ ಹೆಗ್ಡೆ ನಿರ್ವಹಿಸಿದರು.

Tags: #ಕಾಪು#ಹೊಸ ಮಾರಿಗುಡಿ#ಸಮಾಲೋಚನ ಸಭೆ#ನ್ಯೂಸ್
Previous Post

ಪುತ್ತಿಗೆ ಶ್ರೀಗಳವರ ವಿಶ್ವ ಗೀತಾ ಪರ್ಯಾಯದಲ್ಲಿ ವಿಶ್ವಕರ್ಮ ಸಮಾಜದ ಪಾಲ್ಗೊಳ್ಳುವಿಕೆ…!!

Next Post

ಮಣಿಪಾಲ : ಭಾರತೀಯ ಪಾಕಪದ್ಧತಿಯ ಸಂರಕ್ಷಣೆ ಮತ್ತು ಆಚರಣೆ ಇನ್ನಷ್ಟು ಜನ ಪ್ರಿಯಗೊಳಿಸಬೇಕಾದ ಅಗತ್ಯವಿದೆ : ಅಂತಾರಾಷ್ಟ್ರೀಯ ಬಾಣಸಿಗ ವಿಕಾಸ್ ಖನ್ನಾ…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಭಾರತೀಯ ಪಾಕಪದ್ಧತಿಯ ಸಂರಕ್ಷಣೆ ಮತ್ತು ಆಚರಣೆ ಇನ್ನಷ್ಟು ಜನ ಪ್ರಿಯಗೊಳಿಸಬೇಕಾದ ಅಗತ್ಯವಿದೆ : ಅಂತಾರಾಷ್ಟ್ರೀಯ ಬಾಣಸಿಗ ವಿಕಾಸ್ ಖನ್ನಾ...!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026

Recent News

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved