Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
06/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಚಿತ್ರದುರ್ಗ, ಅಕ್ಟೋಬರ್ 6 :ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿರುವ ಬಗ್ಗೆಪ್ರತಿಕ್ರಿಯೆ ನೀಡುತ್ತಾ, ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ , ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.

*ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಧಾನ್ಯತೆ :*

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ. ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

7 ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: #ಚಿತ್ರದುರ್ಗ#ಸಿದ್ದರಾಮಯ್ಯ#ನ್ಯೂಸ್
Previous Post

ಬನ್ಸ್ ರಾಘು ಕೊಲೆ ಪ್ರಕರಣ:‌ ಇಬ್ಬರು ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ…!!!

Next Post

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026