Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಓಡಿಶಾದ ಮಾನಸಿಕ ಅಸ್ವಸ್ಥ ಸಮಾಜ ಸೇವಕ ವಿಶು ಶೆಟ್ಟಿ ಅವರ ನೆರವಿನಿಂದ ಗುಣಮುಖನಾಗಿ ಕುಟುಂಬಕ್ಕೆ ಹಸ್ತಾಂತರ..!!

Dhrishya News by Dhrishya News
06/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 06:ದ್ರಶ್ಯನ್ಯೂಸ್ :ಸಮಾಜ ಸೇವಕ ವಿಶು ಶೆಟ್ಟಿ ಅವರಿಂದ ಕಳೆದ ಸೆ.೧೦ರಂದು ರಕ್ಷಿಸಲ್ಪಟ್ಟು ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಓಡಿಶಾದ ಮಾನಸಿಕ ಅಸ್ವಸ್ಥ ಭಿಕಾಯ್ (55) ಎಂಬವರು ಇದೀಗ ಗುಣಮುಖರಾಗಿ ಸಮಾಜ ಸೇವಕ ವಿಶು ಶೆಟ್ಟಿ ಅವರ ನೆರವಿನಿಂದ ತನ್ನ ಕುಟುಂಬವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಈತ ಮಾನಸಿಕ ಅಸ್ವಸ್ಥನಾಗಿ ಉಡುಪಿ, ಮಣಿಪಾಲ ಭಾಗದ ಸಾರ್ವಜನಿಕರ ಮನೆಗಳಿಗೆ ನುಗ್ಗಿ ಭಯದ ವಾತಾವರಣ ಸೃಷ್ಟಿಸಿದ್ದ. ಈತನನ್ನು ವಿಶು ಶೆಟ್ಟಿ ಅವರು ಬಾಳಿಗಾ ಆಸ್ಪತ್ರೆಗೆ ದಾಖಲಿಸಿ, 23 ದಿನಗಳ ಚಿಕಿತ್ಸೆ ಕೊಡಿಸಿದ್ದರು. ಇದೀಗ ಚೇತರಿಸಿಕೊಂಡ ಭಿಕಾಯ್ ತನ್ನ ಮನೆಯ ವಿಳಾಸ ತಿಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಆಸ್ಪತ್ರೆಯ ವೈದ್ಯರು ಹಾಗೂ ಶಾಲಿನಿ ಶರ್ಮ ಅವರ ನೆರವಿನಿಂದ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಿದ ವಿಶು ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

ವ್ಯಕ್ತಿಯ ಮಗ ಹಾಗೂ ಸಂಬಂಧಿಕರು ಉಡುಪಿಗೆ ಬಂದಿದ್ದು ಭಿಕಾಯ್‌ನನ್ನು ಅವರ ವಶಕ್ಕೆ ಒಪ್ಪಿಸಲಾಯಿತು. ಭಿಕಾಯ್ ಗೋವಾದಲ್ಲಿ ತನ್ನವರೊಂದಿಗೆ ಕಾರ್ಮಿಕನಾಗಿ ದುಡಿಯುತ್ತಿದ್ದು, ಮಾನಸಿಕ ರೋಗಕ್ಕೆ ತುತ್ತಾಗಿ ಕಾಲ್ನಡಿಗೆಯಲ್ಲಿಯೇ ಉಡುಪಿಗೆ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ಆಸ್ಪತ್ರೆಯ ವೆಚ್ಚದಲ್ಲಿ 5೦೦೦ ರೂಪಾಯಿ ಮೊತ್ತವನ್ನು ವಿಶು ಶೆಟ್ಟಿ ಭರಿಸಿ ಮಾನವೀಯತೆ ಮೆರೆದಿದ್ದಾರೆ.

10 ತಿಂಗಳಲ್ಲಿ 17 ಮಂದಿಯನ್ನು ಕುಟುಂಬಕ್ಕೆ ಸೇರಿಸಿದರು ಸಮಾಜ ಸೇವಕ ವಿಶು ಶೆಟ್ಟಿ ಅವರು ಅದೆಷ್ಟೋ ಮಂದಿ ನಿರಾಶ್ರಿತರು, ಮಾನಸಿಕ ಅಸ್ವಸ್ಥರನ್ನು ರಕ್ಷಿಸಿ ಚಿಕಿತ್ಸೆ ನೀಡಿ ಅವರ ಕುಟುಂಬಕ್ಕೆ ಸೇರಿಸಿದ್ದಾರೆ. ಕಳೆದ ಜನವರಿಯಿಂದ ಸೆಪ್ಟೆಂಬರ್ ವರೆಗೆ ಕಳೆದ 10 ತಿಂಗಳಲ್ಲಿ 17 ಮಂದಿಯನ್ನು ರಕ್ಷಿಸಿ ಅವರಿಗೆ ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಕುಟುಂಬಕ್ಕೆ ಹಸ್ತಾಂತರಿಸಿ ನೈಜಾರ್ಥದಲ್ಲಿ ಸಮಾಜ ಸೇವೆಗೈದಿದ್ದಾರೆ, ಈ 17 ಮಂದಿಯಲ್ಲಿ ಪುರುಷರು, ಮಹಿಳೆಯರು, ಯುವಕ, ಯುವತಿಯರಲ್ಲದೆ 3 ಮಂದಿ ಅಪ್ರಾಪ್ತರು ಕೂಡಾ ಸೇರಿದ್ದಾರೆ.

Previous Post

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Next Post

ಉಚ್ಚಿಲ ದಸರಾ ಮಹೋತ್ಸವ “ಪೊಣ್ಣು ಪಿಲಿ ನಲಿಕೆ ಸ್ಪರ್ಧೆ”: ಯಶ್‍ಪಾಲ್.ಎ.ಸುವರ್ಣ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ ದಸರಾ ಮಹೋತ್ಸವ "ಪೊಣ್ಣು ಪಿಲಿ ನಲಿಕೆ ಸ್ಪರ್ಧೆ": ಯಶ್‍ಪಾಲ್.ಎ.ಸುವರ್ಣ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved