Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!
0
SHARES
37
VIEWS
Share on FacebookShare on Twitter

ಕುಂದಾಪುರ :ಅಕ್ಟೋಬರ್ 09: ದ್ರಶ್ಯ ನ್ಯೂಸ್:ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಕುಂದಾಪುರ ರೈಲು ನಿಲ್ದಾಣದಲ್ಲಿ ಇಂದಿನಿಂದ (ಅಕ್ಟೋಬರ್ 09 )ಆರಂಭಗೊಳ್ಳಲಿದ್ದು, ಈ ಮೂಲಕ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಗೋವಾ, ಕೇರಳಗಳಿಂದ ಬರುವ ಅಸಂಖ್ಯಾತ ರೈಲು‌ ಪ್ರಯಾಣಿಕರಿಗೆ ಈ‌ ಪ್ರಿಪೈಡ್ ಆಟೋ ರಿಕ್ಷಾ ಕೇಂದ್ರ ವರದಾನವಾಗಲಿದೆ.

ಕಳೆದ ಹಲವಾರು ವರ್ಷಗಳಿಂದ ಪತ್ರಿಕೆಗಳ ವಾಚಕರ ವಿಭಾಗ ಹಾಗು ಪುರವಣಿಗಳಲ್ಲಿ ಸಾರ್ವಜನಿಕರ ಪ್ರಿಪೈಡ್ ಬೇಡಿಕೆ ನಿರಂತರವಾಗಿ ಬರುತಿದ್ದ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಪ್ರಿಪೈಡ್ ಆಟೋ ಟೆಂಡರ್ ಕರೆದಿತ್ತು. ಇದರ ಜತೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ಆಯೋಜಿಸಿದ್ದ ಕೊಂಕಣ ರೈಲ್ವೆ ಅದಿಕಾರಿಗಳ ಸಭೆಯಲ್ಲೂ ಪ್ರಯಾಣಿಕರ ದೂರು ದುಮ್ಮಾನಗಳ ಆಲಿಸುವಿಕೆಯ ಸಂದರ್ಭದಲ್ಲೂ ಪತ್ರಿಕಾ ಮಾದ್ಯಮಗಳು ಜನರ ಸಮಸ್ಯೆಯನ್ನು ಅದಿಕಾರಿಗಳ ಮುಂದಿಟ್ಟಿದ್ದರು.

ಕುಂದಾಪುರ ರೈಲು‌ ನಿಲ್ದಾಣದಲ್ಲಿ ಇಳಿದು ಯಾವುದೇ ಭಾಗಕ್ಕೂ ರಾಜ್ಯ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಆಟೋ ಬಾಡಿಗೆಗೆ ಲಭ್ಯವಾಗಲಿದೆ.

ಕುಂದಾಪುರ ರೈಲು‌ ನಿಲ್ದಾಣದ ಹಲವಾರು ಜನ ರಿಕ್ಷಾ ಚಾಲಕರು ಪ್ರಯಾಣಿಕರ ದೂರು ಗೊಂದಲಗಳ ನಿವಾರಿಸಲು ಪ್ರಿಪೈಡ್ ಅಟೋ ಆರಂಭವಾಗಲಿ ಎಂದೇ ಬಯಸಿದ್ದು‌ ಕುಂದಾಪುರ ರೈಲು ಪ್ರಯಾಣಿಕರ‌ ಹಿತರಕ್ಷಣಾ ಸಮಿತಿಯ ಗಮನಕ್ಕೆ ತಂದಿದ್ದರು‌.

ಪ್ರಿಪೈಡ್ ಆಟೋ ಆರಂಭವಾಗುವ ಮೂಲಕ ಪ್ರಯಾಣಿಕರು ಮನೆಗಳಿಂದ ಅಥವಾ ಪರಿಚಯದ ವಾಹನಗಳನ್ನು ನಿಲ್ದಾಣಕ್ಕೆ ಮುಂಚಿತವಾಗಿ ಬರ ಹೇಳ ಬೇಕಾದ ಸಮಸ್ಯೆ ಪರಿಹಾರವಾಗುವ ನಿರೀಕ್ಷೆ ಇದ್ದು ಈ ಮೂಲಕ ನಿಲ್ದಾಣದ ಪರಿಸರದ ಅಟೋ ಚಾಲಕರಿಗೇ ಬಾಡಿಗೆ ಹೆಚ್ವಾಗುವ ಆಶಾ ಭಾವನೆ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಗಿದೆ.

ಗೋವಾ ಬೆಂಗಳೂರಿನಿಂದ ಬರುವ ಟಿಕೇಟ್ ದರಕ್ಕಿಂತ ನಿಲ್ದಾಣದಿಂದ ಕುಂದಾಪುರಕ್ಕೆ ತೆರಳುವ ಅಟೋ ಬಾಡಿಗೆ ಜಾಸ್ತಿ ಎಂಬ ಬಗ್ಗೆ ನಿರಂತರವಾಗಿ ಸಮಾಜಿಕ ಜಾಲತಾಣಗಳಲ್ಲಿ ಬರುತಿದ್ದ ದೂರುಗಳಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದ್ದು ಜನಸಾಮಾನ್ಯರು ಈ ಸೌಲಭ್ಯದ ಸದುಪಯೋಗ ಪಡೆಯ ಬಹುದು ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ತಿಳಿಸಿದೆ.

Tags: #ಕುಂದಾಪುರ#ಆರಂಭ#ನ್ಯೂಸ್
Previous Post

ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌: ಕಾರ್ಕಳದ ಆಯುಷ್ ಶೆಟ್ಟಿ ಗೆ ಕಂಚಿನ ಪದಕ ..!!

Next Post

ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved