Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಪಶ್ಚಿಮ ಘಟ್ಟಗಳ ಕಾಡಿನ ಅಂಚಿನಲ್ಲಿ ವಾಸಿಸುವ ಮಲೆಕುಡಿಯ ಜನಾಂಗದವರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು…!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 10 : ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತಿಯ ಪಶ್ಚಿಮ ಘಟ್ಟಗಳ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ, ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶನಿವಾರ ಭೇಟಿ ಮಾಡಿದರು.

ನಗರ ಪ್ರದೇಶದಿಂದ ಬಹುದೂರದ, ಅರಣ್ಯದ ಅತ್ಯಂತ ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 3 ರಿಂದ 4 ಕಿ.ಮೀ ಕಾಡು ಕಚ್ಛಾ ದಾರಿಯಲ್ಲಿ ಗುಡ್ಡಗಳನ್ನ ಹತ್ತಿ ಇಳಿದು ನದಿ, ಕೊಳ್ಳಗಳನ್ನು ದಾಟಿ ನಡೆದು ಕುಗ್ರಾಮಕ್ಕೆ ಭೇಟಿ ನೀಡಿದರು.

ಹಲವು ವರ್ಷಗಳಿಂದ ಆಧುನಿಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಮಲೆಕುಡಿಯ ಮೂಲ ಆದಿ ನಿವಾಸಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿ, ಅವರ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿ, ಬುಡಕಟ್ಟು ಜನಾಂಗದವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ತಿಳಿಸಿದರು.

ಪಶ್ಚಿಮ ಘಟ್ಟಗಳ ಅಂಚಿನ ಕಾಡಿನ ತೆಂಗಮಾರು ಗ್ರಾಮದಲ್ಲಿ ವಾಸವಾಗಿರುವ ನಾರಾಯಣ ಗೌಡ ಅವರನ್ನು ಸಂಪರ್ಕಿಸಿ, ಅವರ ವಾಸಗೃಹವನ್ನು ವೀಕ್ಷಿಸಿ, ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಮನೆಯನ್ನು ನಿರ್ಮಿಸಿ ಕೊಡಲು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ತಿಂಗಳಮಕ್ಕಿ ಗ್ರಾಮದಲ್ಲಿ ವಾಸವಿರುವ ವಿಕಲಚೇತನ ಲಕ್ಷಣಗೌಡ ಅವರನ್ನು ಭೇಟಿ ಮಾಡಿ, ಅಂಗವಿಕಲ ಪಿಂಚಣಿ ಪ್ರತಿ ತಿಂಗಳು ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ಸರ್ಕಾರದಿಂದ ಬುಡಕಟ್ಟು ಜನರಿಗೆ ವಿಶೇಷವಾಗಿ ನೀಡುತ್ತಿರುವ ಆಹಾರ ಸಾಮಗ್ರಿಗಳ ಪೂರೈಕೆ ಬಗ್ಗೆ ಸಹ ಮಾಹಿತಿ ಪಡೆದು, ಮನೆಯ ದುರಸ್ತಿಗೆ ಅನುದಾನ ಒದಗಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಪೀತಬೈಲು ಗ್ರಾಮಕ್ಕೆ ಭೇಟಿ ನೀಡಲು ಕಾಡಿನ ಕಚ್ಛಾ ರಸ್ತೆಯಲ್ಲಿ ನಡೆದು ಕಾಲು ಸಂಕದ ಮೂಲಕ ದಾಟಲು ಮುಂದಾದಾಗ, ಕೆಲವೇ ಕ್ಷಣದ ಮುಂದೆ

Tags: #ಉಡುಪಿ#ಪಶ್ಚಿಮ ಘಟ್ಟ#ಡಾ.ಕೆ ವಿದ್ಯಾಕುಮಾರಿ#ನ್ಯೂಸ್
Previous Post

ಉಡುಪಿ ಜಿಲ್ಲಾ ಸರಕಾರಿ ವಕೀಲರಾಗಿ ಮೇರಿ ಆಯನ್ನಿ ಶ್ರೇಷ್ಠ ಹಾಗೂ ಅಪರ ಸರಕಾರಿ ವಕೀಲರಾಗಿ ಭುವನೇಂದ್ರ ಸುವರ್ಣ ನೇಮಕ..!!

Next Post

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ.15 ರಿಂದ ಅ.24 ರವರೆಗ `ಉಚ್ಚಿಲ ದಸರಾ ಉತ್ಸವ-2023′..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ.15 ರಿಂದ ಅ.24 ರವರೆಗ `ಉಚ್ಚಿಲ ದಸರಾ ಉತ್ಸವ-2023′..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved