Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ದೇವತಾರಾದನೇ ಸಮಾರಾಧನೆ ಕಲರಾಧನೆಗೆ ಚಾಲನೆ..!!

Dhrishya News by Dhrishya News
16/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 16:ದ್ರಶ್ಯ ನ್ಯೂಸ್: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಿರಂತರ ಹತ್ತು ದಿನಗಳ ಕಾಲ ಸಂಪನ್ನಗೊಳ್ಳಲಿರುವ ನವರಾತ್ರಿ ಮಹೋತ್ಸವದ ದೇವತಾರಾಧನೆಯಾಗಿ ದಿನಂಪ್ರತಿ ಜೋಡಿ ಚಂಡಿಕಾಯಾಗ ದುರ್ಗಾ ನಮಸ್ಕಾರ ಪೂಜೆ, ಕಲ್ಪೋಕ್ತ ಪೂಜೆ ಸಹಿತ ರಂಗ ಪೂಜೆ, ಧಾರ್ಮಿಕ ಕಾರ್ಯಕ್ರಮವಾಗಿ ನೆರವೇರಿತು.

ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಧರ್ಮದರ್ಶಿ ರಮಾನಂದ ಗುರೂಜಿ ಉದ್ಘಾಟಿಸಿದರು

ಕ್ಷೇತ್ರದ ನವಶಕ್ತಿ ವೇದಿಕೆ ಹಾಗೂ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ಕ್ಷೇತ್ರದ ನಾಟ್ಯ ರಾಣಿ ಗಂಧರ್ವ ಕನ್ಯೆಯ ಪ್ರೀತ್ಯರ್ಥವಾಗಿ ದುರ್ಗಾ ಆದಿಶಕ್ತಿ ದೇವಿಯ ಅನುಗ್ರಹಕ್ಕಾಗಿ ಹಲವಾರು ನೃತ್ಯ ತಂಡದ ನೃತ್ಯಾರ್ಥಿಗಳು ಕಲಿಕಾ ಸಾಧನೆಗಾಗಿ ಶ್ರದ್ದಾಪೂರ್ವಕವಾಗಿ ಸೇವೆ ಸಲ್ಲಿಸಿದರು..

ಮುಂಬಯಿಯ ಸುರೇಶ್ ಮತ್ತು ಅಖಿಲಾ ದಂಪತಿಗಳಿಂದ ಹಾಗೂ ರಾಜೇಂದ್ರ ಹಾಗೂ ರಾಧಾ ನಾಡರ್ ಇವರಿಂದ ಜೋಡಿ ಚಂಡಿಕಾಯಾಗ, ಶ್ರೀಮತಿ ಶ್ರೀ ಮತ್ತು ಶ್ರೀಮತಿ ಶ್ವೇತಾ ನಕುಲ್ ಅವರಿಂದ ದುರ್ಗಾ ನಮಸ್ಕಾರ ಪೂಜೆ ರಂಗ ಪೂಜೆ ಧಾರ್ಮಿಕ ಕಾರ್ಯಕ್ರಮವಾಗಿ ಸಂಪನ್ನಗೊಂಡಿತು..

ಬ್ರಾಹ್ಮರಿ ನಾಟ್ಯಾಲಯದ ವಿ ಭವಾನಿ ಶಂಕರ್ ಅವರ ಶಿಷ್ಯರಿಂದ, ನರ್ತಕಿ ನಾಟ್ಯಾಲಯದ ಶಾಂಭವಿ ಜಿ. ಆಚಾರ್ಯ ಅವರ ಶಿಷ್ಯರಿಂದ, ಸೃಷ್ಟಿ ನೃತ್ಯ ಕುಠೀರದ ಡಾ ಮಂಜರಿ ಚಂದ್ರ ಅವರ ಶಿಷ್ಯರಿಂದ, ಮತ್ತು ಸ್ಥಳೀಯ ಕಲಾವಿದರಾದ ಪ್ರಣವಿ ಶೆಟ್ಟಿಗಾರ್ ಶರಣ್ಯಾ, ಇಶಿಕಾ, ಆರಾಧ್ಯಾ, ಅಕ್ಷರ ಹಾಗೂ ವಿದುಷಿ ಧನ್ಯಶ್ರೀ ಪ್ರಭು ಹಾಗೂ ಅವರ ಶಿಷ್ಯರಿಂದ ನೃತ್ಯ ಸೇವೆ ಸಮರ್ಪಿಸಲ್ಪಟ್ಟಿತು..

ಉಪ್ಪುರು ಭಾಗ್ಯಲಕ್ಷ್ಮಿ ನೇತೃತ್ವದ ಕಲಾ ನಿಧಿ ತಂಡದ ಗಾಯಕರಿಂದ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಜಾನಪದ ಭಾವಗೀತೆಗಳ ರಸದೌತಣ ನೆರವೇರಿತು. ಸಾಂಸ್ಕೃತಿಕ ನೃತ್ಯ ಕಲಾ ಬಳಗ ಕುಂಜಿಬೆಟ್ಟು ಇವರಿಂದ ಕರಗ ನೃತ್ಯ ಯಕ್ಷ ನೃತ್ಯ ಜಾನಪದ ನೃತ್ಯ ಮತ್ತು ವಿಶೇಷವಾದ ಪಣ ನೃತ್ಯ ಮನೋರಂಜನ ಕಾರ್ಯಕ್ರಮವಾಗಿ ಮೂಡಿಬಂದಿತು..

ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ಪ್ರದರ್ಶಿತ ಕೊಂಡ ಹುಲಿ ವೇಷ ನೃತ್ಯ ಎಲ್ಲರ ಮನಸ್ಸುರೆಗೊಂಡಿತು

ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಗಾನ ನಾಟ್ಯ ಸೇವೆ ನೀಡುವ ಕಲಾವಿದರು ಗತಕಾಲದ ಕ್ಷೇತ್ರ ರಚನೆಗೆ ಕಾರಣೀಭೂತರಾದ ಕ್ಷೇತ್ರ ಗುರುಗಳಾಗಿ ಗುರುತಿಸಲ್ಪಟ್ಟು ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ಪೂಜಿಸಲ್ಪಡುತ್ತಿರುವ ಕಪಿಲ ಮಹರ್ಷಿಗಳ ಅನುಗ್ರಹಕ್ಕಾಗಿ ಸರತಿ ಸಾಲಿನಲ್ಲಿ ತೆರಳುತ್ತಿರುವುದು ಕ್ಷೇತ್ರ ಗುರುಗಳ ಪ್ರಾಬಲ್ಯಕ್ಕೆ ಸಾಕ್ಷಿ ಭೂತವಾದಂತಿತ್ತು ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿದ್ದಾರೆ.

Previous Post

ಉಡುಪಿ : ಈಜು ತಜ್ಞ,ಜೀವರಕ್ಷಕ ಈಶ್ವರ್ ಮಲ್ಪೆ ಯವರಿಗೆ : ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!!

Next Post

A two day national level conference on “Advanced Materials for Environmental Sustainability-AMES-2023” was organized by Department of Chemical Engineering M,I,T Manipal ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

A two day national level conference on “Advanced Materials for Environmental Sustainability-AMES-2023” was organized by Department of Chemical Engineering M,I,T Manipal ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026

Recent News

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved