Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ ಅಂತರರಾಷ್ಟ್ರೀಯ ಕ್ಯಾನ್ಸರ್ ಕಂಟ್ರೋಲ್ ಒಕ್ಕೂಟದಲ್ಲಿ ಸದಸ್ಯತ್ವದ ಮನ್ನಣೆ..!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮಣಿಪಾಲ, 20 ಅಕ್ಟೋಬರ್ 2023: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ (ಎಂ ಸಿ ಸಿ ಸಿ ಸಿ), ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC ಅಂತರರಾಷ್ಟ್ರೀಯ ಕ್ಯಾನ್ಸರ್ ಕಂಟ್ರೋಲ್ ಒಕ್ಕೂಟ ) ನಲ್ಲಿ ಸದಸ್ಯತ್ವ ದೊರೆತಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ. ಈ ಪ್ರತಿಷ್ಠಿತ ಮನ್ನಣೆಯಿಂದ ಕ್ಯಾನ್ಸರ್ ಆರೈಕೆ, ಸಂಶೋಧನೆ ಮತ್ತು ಶಿಕ್ಷಣದ ಕ್ಷೇತ್ರದಲ್ಲಿ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಖ್ಯಾತಿಯು ಜಾಗತಿಕ ಮಟ್ಟದಲ್ಲಿ ಉನ್ನತ ಮಟ್ಟಕೆ ಏರಿದೆ. ಜಾಗತಿಕವಾಗಿ ಹೆಸರಾಂತ ಸಂಸ್ಥೆಯಾದ ಯು ಐ ಸಿ ಸಿ ಸದಸ್ಯತ್ವವನ್ನು ಸುಲಭವಾಗಿ ಪಡೆಯಲಾಗುವುದಿಲ್ಲ. ಇದು ನಿಖರವಾದ ಮೌಲ್ಯಮಾಪನ ಪ್ರಕ್ರಿಯೆ ಮತ್ತು ಜಾಗತಿಕ ಮಾನದಂಡಗಳಿಗೆ ಕಟ್ಟುನಿಟ್ಟಾದ ಅನುಸರಣೆಯನ್ನು ಒಳಗೊಂಡಿರುತ್ತದೆ. ಕ್ಯಾನ್ಸರ್ ಚಿಕಿತ್ಸೆ ಮತ್ತು ಉನ್ನತ ಸಂಶೋಧನೆಯನ್ನು ಮುನ್ನಡೆಸಲು ಕೇಂದ್ರದ ಅಚಲ ಬದ್ಧತೆಯನ್ನು ಇದು ಒತ್ತಿಹೇಳುತ್ತದೆ.

ಈ ಮನ್ನಣೆಯೊಂದಿಗೆ, ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ತರಬೇತಿ ಅವಕಾಶಗಳಿಗೆ ನೇರ ಪ್ರವೇಶವನ್ನು ಪಡೆಯಲಿದ್ದಾರೆ. ಇದು ಕೇಂದ್ರದಲ್ಲಿ ಲಭ್ಯವಿರುವ ಶಿಕ್ಷಣ ಮತ್ತು ತರಬೇತಿಯ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ, ರಾಷ್ಟ್ರೀಯ ಮತ್ತು ಜಾಗತಿಕವಾಗಿ ಕ್ಯಾನ್ಸರ್ ಆರೈಕೆಯಲ್ಲಿ ನಮ್ಮ ಕೇಂದ್ರವು ಮುಂಚೂಣಿಯಲ್ಲಿದೆ ಎಂದು ಖಚಿತಪಡಿಸುತ್ತದೆ. ಈ ಸದಸ್ಯತ್ವದ ಸಂಪೂರ್ಣ ಪ್ರಯೋಜನಗಳ ವಿವರವಾದ ರೂಪರೇಖೆಯನ್ನು ಯು ಐ ಸಿ ಸಿ ವೆಬ್ ಸೈಟ್ ನ ಸದಸ್ಯರ ಪ್ರಯೋಜನ ಅಡಿಯಲ್ಲಿ ಕಾಣಬಹುದು.

ಈ ಸಂಧರ್ಭದಲ್ಲಿ ಕ್ಯಾನ್ಸರ್ ಗುಣಮಟ್ಟ ಸುಧಾರಣೆ (CQI) ತಂಡದ ಹಿಂದಿನ ಪ್ರೇರಕ ಶಕ್ತಿಗಳಾದ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉಪ ಸಂಯೋಜಕರಾದ ಡಾ. ವಾಸುದೇವ ಭಟ್ ಕೆ ಮತ್ತು ಡಾ. ಶೆರ್ಲಿ ಸಾಲಿನ್ಸ್ ಅವರಿಗೆ ವಿಶೇಷ ಪ್ರಶಂಸೆಗಳನ್ನು ಹೇಳ ಬಯಸುತ್ತೇವೆ. ಇವರ ದೃಢವಾದ ಪ್ರಯತ್ನಗಳು, ಕ್ಯಾನ್ಸರ್ ಗುಣಮಟ್ಟ ಸುಧಾರಣೆ ತಂಡದ ಕೊಡುಗೆಗಳ ಜೊತೆಯಲ್ಲಿ, ಈ ಉತ್ಕ್ರಷ್ಟ ಮನ್ನಣೆ ಪಡೆಯಲು ಪ್ರಮುಖವಾಗಿದೆ .

ಯು ಐ ಸಿ ಸಿ ಯ ಅಧ್ಯಕ್ಷ ಪ್ರೊ. ಜೆಫ್ ಡನ್ ಎಒ ಅವರು, “ಯು ಐ ಸಿ ಸಿ ಕುಟುಂಬಕ್ಕೆ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆಯ ಸೇರ್ಪಡೆಯು ಉತ್ಕೃಷ್ಟತೆಯ ಜಾಗತಿಕ ಮಾನದಂಡಗಳಿಗೆ ಅದರ ಬದ್ಧತೆಯನ್ನು ಸೂಚಿಸುತ್ತದೆ. ಕ್ಯಾನ್ಸರ್ ಆರೈಕೆಯನ್ನು ಉತ್ತಮಗೊಳಿಸುವ ಅವರ ಸಮರ್ಪಣೆ ನಿಜವಾಗಿಯೂ ಶ್ಲಾಘನೀಯವಾಗಿದೆ ಮತ್ತು ಈ ಪಾಲುದಾರಿಕೆಯ ಪರಿವರ್ತಕ ಪರಿಣಾಮವನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.

ಯು ಐ ಸಿ ಸಿ ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕ್ಯಾರಿ ಆಡಮ್ಸ್, “ಎಂ ಸಿ ಸಿ ಸಿ ಸಿ ಯಂತಹ ಸಂಸ್ಥೆಗಳೊಂದಿಗಿನ ಸಹಯೋಗವು ನಮ್ಮ ಧ್ಯೇಯವನ್ನು ಇನ್ನಷ್ಟು ಬಲಪಡಿಸುತ್ತದೆ. ಕ್ಯಾನ್ಸರ್ ಆರೈಕೆ ಮತ್ತು ಸಂಶೋಧನೆಯನ್ನು ಮುಂದುವರಿಸಲು ಅವರ ಅಚಲವಾದ ಸಮರ್ಪಣೆಯು ಜಾಗತಿಕ ಸಮುದಾಯಕ್ಕೆ ಅಗತ್ಯವಿದೆ. ನಾವು ಅವರನ್ನು ಯು ಐ ಸಿ ಸಿ ಕುಟುಂಬಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದಿದ್ದಾರೆ.

ಈ ಮೈಲಿಗಲ್ಲಿಗೆ ಕಾರಣರಾದ ಡಾ.ವಾಸುದೇವ ಭಟ್ ಕೆ ಅವರು ,ಯು ಐ ಸಿ ಸಿ ಯ ಗೌರವಾನ್ವಿತ ಸದಸ್ಯರೊಂದಿಗೆ ಸ್ಥಾನ ಗಳಿಸುವುದು ಎಂ ಸಿ ಸಿ ಸಿ ಸಿ ಯಲ್ಲಿನ ನಮ್ಮ ತಂಡದ ಸಮರ್ಪಣೆಗೆ ಸಾಕ್ಷಿಯಾಗಿದೆ . ಇದರೊಂದಿಗೆ, ಕ್ಯಾನ್ಸರ್ ಆರೈಕೆಯ ಮಾನದಂಡಗಳನ್ನು ಉನ್ನತೀಕರಿಸುವ ನಮ್ಮ ಗುರಿಯನ್ನು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ. ಇಂತಹ ಪ್ರತಿಷ್ಠಿತ ವೇದಿಕೆಯಲ್ಲಿ ಗುರುತಿಸಿಕೊಳ್ಳುವುದು ನಮ್ಮ ಕಾರ್ಯಕ್ಕೆ ಉತ್ತೇಜನ ನೀಡುತ್ತದೆ. ಯು ಐ ಸಿ ಸಿ ಸಮುದಾಯದ ಭಾಗವಾಗಿ, ಕ್ಯಾನ್ಸರ್ ಆರೈಕೆ ಮತ್ತು ಸಂಶೋಧನೆಯಲ್ಲಿ ಅದ್ಭುತ ಪ್ರಗತಿಯನ್ನು ಬೆಳೆಸುವ ನಮ್ಮ ಸಂಕಲ್ಪವು ಎಂದಿಗಿಂತಲೂ ಬಲವಾಗಿದೆ ಎಂದು ಡಾ. ಶೆರ್ಲಿ ಸಾಲಿನ್ಸ್ ಅಭಿಪ್ರಾಯ ಪಟ್ಟಿದ್ದಾರೆ.

Tags: #ಮಣಿಪಾಲ#ಮಹೇ#ಕ್ಯಾನ್ಸರ್ ಆರೈಕೆ ಕೇಂದ್ರ#ನ್ಯೂಸ್
Previous Post

ಜಸ್ಟಿಸ್ ಕೆ.ಎಸ್ ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನಾ ಸಮಾರಂಭ – ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿನಯಾಭಿವಂಧನೆ…!!

Next Post

ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!!

ಮಲಬಾರ್ ಗ್ರೂಪ್ಸ್ ನ ಅಜ್ಜಿ ಮನೆ ಯೋಜನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved